Ad imageAd image

ಸಿಎಂ ಕಾರ್ಯಕ್ರಮಕ್ಕೆ ಹೊರಟಿದ್ದ ಪತ್ರಕರ್ತರ ವಾಹನ ಅಪಘಾತ

ಎತ್ತಿನಹೊಳೆ ಯೋಜನೆಯ ಮೊದಲ ಹಂತದ ಲೋಕಾರ್ಪಣೆಯ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮರ್ ಸೇರಿ

Nagesh Talawar
ಸಿಎಂ ಕಾರ್ಯಕ್ರಮಕ್ಕೆ ಹೊರಟಿದ್ದ ಪತ್ರಕರ್ತರ ವಾಹನ ಅಪಘಾತ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಹಾಸನ(Hasana): ಎತ್ತಿನಹೊಳೆ(Ettianahole project) ಯೋಜನೆಯ ಮೊದಲ ಹಂತದ ಲೋಕಾರ್ಪಣೆಯ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮರ್ ಸೇರಿ ಅನೇಕರು ಭಾಗವಹಿಸಿದ್ದರು. ಈ ಕಾರ್ಯಕ್ರಮದ ವರದಿ ಮಾಡಲು ಹೋಗುತ್ತಿದ್ದ ಪತ್ರಕರ್ತರ(Journalist) ವಾಹನದ ಬ್ರೇಕ್ ಫೇಲ್ ಆಗಿ ಅಪಘಾತವಾಗಿದೆ. ಸಕಲೇಶಪುರ ತಾಲೂಕಿನ ಬಾಳ್ಳುಪೇಟೆ ಹತ್ತಿರ ವಾಹನ ಲಾರಿಗೆ ಡಿಕ್ಕಿ ಹೊಡೆದಿದೆ. ಇದರಿಂದಾಗಿ 7 ಪತ್ರಕರ್ತರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಸಕಲೇಶಪುರ ತಾಲೂಕಿನ ದೊಡ್ಡನಗರ ಗ್ರಾಮದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಇಲ್ಲಿಗೆ ವಾರ್ತಾ ಇಲಾಖೆಯಿಂದ ವಾಹನದಲ್ಲಿ ಪತ್ರಕರ್ತರನ್ನು ಕರೆದುಕೊಂಡು ಹೋಗಲಾಗುತ್ತಿತ್ತು. ಈ ವೇಳೆ ಗಾಡಿಯ ಬ್ರೇಕ್ ಫೇಲ್ ಆಗಿ ಲಾರಿಗೆ ಗುದ್ದಿದೆ. ಅದೃಷ್ಟವಶಾತ್ ಯಾರಿಗೂ ಯಾವುದೇ ಅನಾಹುತವಾಗಿಲ್ಲ. ಸಣ್ಣಪುಟ್ಟ ಗಾಯಗಳಿಂದ ಬಚಾವ್ ಆಗಿದ್ದಾರೆ.

WhatsApp Group Join Now
Telegram Group Join Now
Share This Article