Ad imageAd image

ಮಾಡಿದ ತಪ್ಪಿಯಿಂದ ಪಾರಾಗಲು 5 ಗಾಡಿಗಳಿಗೆ ಗುದ್ದಿದ ಲಾರಿ ಡ್ರೈವರ್

ಬೈಕ್ ವೊಂದಕ್ಕೆ ಡಿಕ್ಕಿ ಹೊಡೆದ ಲಾರಿ ಚಾಲಕನನ್ನು ಗ್ರಾಮಸ್ಥರು ಬೆನ್ನು ಹತ್ತಿದ್ದಾರೆ. ಅವರಿಂದ ತಪ್ಪಿಸಿಕೊಳ್ಳಲು ಹೋಗಿ ಮತ್ತೆ ಐದು ವಾಹನಗಳಿಗೆ ಡಿಕ್ಕಿ ಹೊಡೆದಿರುವ

Nagesh Talawar
ಮಾಡಿದ ತಪ್ಪಿಯಿಂದ ಪಾರಾಗಲು 5 ಗಾಡಿಗಳಿಗೆ ಗುದ್ದಿದ ಲಾರಿ ಡ್ರೈವರ್
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಬೆಳಗಾವಿ(Belagavi): ಬೈಕ್ ವೊಂದಕ್ಕೆ ಡಿಕ್ಕಿ ಹೊಡೆದ ಲಾರಿ ಚಾಲಕನನ್ನು ಗ್ರಾಮಸ್ಥರು ಬೆನ್ನು ಹತ್ತಿದ್ದಾರೆ. ಅವರಿಂದ ತಪ್ಪಿಸಿಕೊಳ್ಳಲು ಹೋಗಿ ಮತ್ತೆ ಐದು ವಾಹನಗಳಿಗೆ ಡಿಕ್ಕಿ ಹೊಡೆದಿರುವ ಘಟನೆ ಅಥನಿ ತಾಲೂಕಿನ ಹಳ್ಯಾಳ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಚಾಲಕನನ್ನು ಹಿಡಿದು ಗ್ರಾಮಸ್ಥರು ಥಳಿಸಿದ್ದಾರೆ. ಇದಕ್ಕಾಗಿ ಬರೋಬ್ಬರಿ 70 ಕಿಲೋ ಮೀಟರ್ ಆತನನ್ನನು ಬೆನ್ನು ಹತ್ತಿದ್ದಾರೆ. ಕೊನೆಗೂ ಸಿಕ್ಕ ಅವನನ್ನು ಹಿಡಿದು ಥಳಿಸಿದ್ದಾರೆ.

ನಂದಗಾಂವ, ಸವದತ್ತಿ, ಸತ್ತಿ, ರಡ್ಡೆರೆಟ್ಟಿ ಗ್ರಾಮದ ಮೂಲಕ ಲಾರಿಯನ್ನು ಚೇಸ್ ಮಾಡಲಾಗಿದೆ. ಮೊದಲು ಒಂದು ಬೈಕ್ ಗೆ ಡಿಕ್ಕಿ ಹೊಡೆದಿದ್ದಾನೆ. ಆಗ ಗ್ರಾಮಸ್ಥರು ಕೇಳಲು ಬರುತ್ತಿದ್ದಂತೆ ಪರಾರಿಯಾಗಲು ಯತ್ನಿಸಿದ್ದಾನೆ. ಹೀಗಾಗಿ ಆತನನ್ನು ಹಿಡಿಯಲು ಜನರು ಮುಂದಾಗಿದ್ದಾರೆ. ಈ ವೇಳೆ ಎದುರಿಗೆ ಬರುತ್ತಿದ್ದ ವಾಹನಗಳಿಗೆ ಡಿಕ್ಕಿ ಹೊಡೆದಿದ್ದಾನೆ. ಇದರ ಪರಿಣಾಮ ಹಲವು ಜನರು ಗಾಯಗೊಂಡಿದ್ದಾರೆ. ಕೊನೆಗೂ ಸಿಕ್ಕ ಲಾರಿ ಚಾಲಕನಿಗೆ ಧರ್ಮದೇಟು ಕೊಟ್ಟು ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಥಣಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ಕೊಟ್ಟು ಲಾರಿ ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.

WhatsApp Group Join Now
Telegram Group Join Now
Share This Article