Ad imageAd image

ಬಸ್ ಹಾಗೂ ಕಾರ್ ನಡುವೆ ಭೀಕರ ಅಪಘಾತ

: ಖಾಸಗಿ ಬಸ್ ಹಾಗೂ ಕಾರ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಕೊರಟಗೆರೆ ತಾಲೂಕಿನ ಇರಕಸಂದ್ರ ಕಾಲೋನಿಯ ಹತ್ತಿರದ ವಡ್ಡರಹಳ್ಳಿ

Nagesh Talawar
ಬಸ್ ಹಾಗೂ ಕಾರ್ ನಡುವೆ ಭೀಕರ ಅಪಘಾತ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ತುಮಕೂರು(Tumakoru): ಖಾಸಗಿ ಬಸ್ ಹಾಗೂ ಕಾರ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಕೊರಟಗೆರೆ ತಾಲೂಕಿನ ಇರಕಸಂದ್ರ ಕಾಲೋನಿಯ ಹತ್ತಿರದ ವಡ್ಡರಹಳ್ಳಿ ಬಳಿ ಶನಿವಾರ ಅಪಘಾತ ನಡೆದಿದೆ. ಕಾರಿನಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾರಿನ ಪರಿಸ್ಥಿತಿ ನೋಡಿದರೆ ಅದರಲ್ಲಿದ್ದವರು ಬದುಕುಳಿದಿದ್ದೆ ಪವಾಡ ಎನ್ನಲಾಗುತ್ತಿದೆ. ಅಷ್ಟರ ಮಟ್ಟಿಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

ಬೆಂಗಳೂರಿನಿಂದ ಅಕ್ಕಿರಾಂಪುರಕ್ಕೆ ಹೊರಟಿದ್ದ ಕಾರು ಹಾಗೂ ಕೋಳಾಲ ಕಡೆಗೆ ಬರುತ್ತಿದ್ದ ಖಾಸಗಿ ಬಸ್ ನಡುವೆ ಅಪಘಾತವಾಗಿದೆ. ಗಂಭೀರವಾಗಿ ಗಾಯಗೊಂಡಿರುವ ನಾಲ್ವರನ್ನು ಕೊರಟಗೆರೆ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೋಳಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

WhatsApp Group Join Now
Telegram Group Join Now
Share This Article