Ad imageAd image

ಜಮ್ಮು ಕಾಶ್ಮೀರದಲ್ಲಿ ಯೋಧ ಹುತಾತ್ಮ

Nagesh Talawar
ಜಮ್ಮು ಕಾಶ್ಮೀರದಲ್ಲಿ ಯೋಧ ಹುತಾತ್ಮ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ನವದೆಹಲಿ(New Delhi): ಉಗ್ರರ ದಾಳಿ ಬೆನ್ನಲ್ಲೇ ಜಮ್ಮು ಕಾಶ್ಮೀರದಲ್ಲಿ ಭಾರತೀಯ ಸೇನಾ ಪಡೆಯಿಂದ ಭಯೋತ್ಪಾದಕರನ್ನು ಸದೆಬಡಿಯುವ ಕಾರ್ಯಾಚರಣೆ ನಡೆಯುತ್ತಿದೆ. ಈ ವೇಳೆ ಯೋಧರೊಬ್ಬರು ಹುತಾತ್ಮರಾಗಿದ್ದಾರೆ ಎಂದು ತಿಳಿದು ಬಂದಿದೆ. ಉದಯಪುರ್ ದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಯೋಧರೊಬ್ಬರು ಗಂಭೀರವಾಗಿ ಗಾಯಗೊಂಡಿದ್ದರು. ಅವರಿಗೆ ಚಿಕಿತ್ಸೆ ನೀಡಲು ಪ್ರಯತ್ನಿಸಿದರೂ ಬದುಕುಳಿಯಲಿಲ್ಲವೆಂದು ತಿಳಿದು ಬಂದಿದೆ.

ಉಧಂಪುರ್ ನ ಬಸಂತ್ ಗಢದಲ್ಲಿ ಕಾರ್ಯಾಚರಣೆ ನಡೆಸಲಾಗುತ್ತಿದೆ. ಭಾರತೀಯ ಸೇನಾ ಪಡೆ ಹಾಗೂ ಜಮ್ಮು ಕಾಶ್ಮೀರ ಪೊಲೀಸರು ಜಂಟಿಯಾಗಿ ಭಯೋತ್ಪಾದಕರ ವಿರುದ್ಧ ಕಾರ್ಯಾಚರಣೆ ಕೈಗೆತ್ತಿಕೊಂಡಿದ್ದಾರೆ. ಪಹಲ್ಗಾಮ್ ನಲ್ಲಿ ನಡೆದ ದಾಳಿಗೆ ಪ್ರತಿಕಾರ ತೀರಿಸಿಕೊಳ್ಳಲು ಯೋಧರ ತೀವ್ರ ಹೋರಾಟ ನಡೆಸಿದ್ದಾರೆ.

WhatsApp Group Join Now
Telegram Group Join Now
Share This Article