Ad imageAd image

ಸಿಎಂ ಇದ್ದ ವೇದಿಕೆಗೆ ನುಗ್ಗಿದ ಯುವಕ

ವಿಧಾನಸೌಧ ಗ್ರಾಂಡ್ ಸ್ಟೆಪ್ಸ್ ನಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು.

Nagesh Talawar
ಸಿಎಂ ಇದ್ದ ವೇದಿಕೆಗೆ ನುಗ್ಗಿದ ಯುವಕ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ವಿಧಾನಸೌಧ ಗ್ರಾಂಡ್ ಸ್ಟೆಪ್ಸ್ ನಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸಚಿವರು, ಶಾಸಕರು ಭಾಗವಹಿಸಿದ್ದರು. ಈ ವೇಳೆ ಯುವಕನೋರ್ವ ವೇದಿಕೆಯತ್ತ ನುಗ್ಗಿ ಬಂದ ಘಟನೆ ನಡೆದಿದೆ. ಹೀಗಾಗಿ ಇದನ್ನು ಭದ್ರತಾ ವೈಫಲ್ಯ ಎಂದು ಹೇಳಲಾಗುತ್ತಿದೆ. ಮಾನವ ಸರಪಳಿ ಕಾರ್ಯಕ್ಕೆ ಸಿಎಂ ಚಾಲನೆ ನೀಡಿದರು.

ಶಾಲು ಹಾಕಿಕೊಂಡಿದ್ದ ಯುವಕ ವೇದಿಕತ್ತ ನುಗ್ಗಿದ್ದಾನೆ. ಈ ವೇಳೆ ಸಿಎಂ ಸೇರಿ ಎಲ್ಲರೂ ಒಂದು ಕ್ಷಣ ಗಾಬರಿಯಾಗಿದ್ದಾರೆ. ತಕ್ಷಣ ಪೊಲೀಸರು ಆತನನ್ನು ವಶಕ್ಕೆ ಪಡೆದರು. ಹೀಗಾಗಿ ಈ ವೇಳೆ ಹೈಡ್ರಾಮಾ ನಡೆಯಿತು. ವಿಧಾನಸೌಧ ಠಾಣೆ ಪೊಲೀಸರು ಯುವಕನನ್ನು ವಶಕ್ಕೆ ಪಡೆದಿದ್ದಾರೆ.

WhatsApp Group Join Now
Telegram Group Join Now
Share This Article