ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಇತ್ತೀಚೆಗೆ ತಮಿಳುನಾಡಿನಲ್ಲಿ ನಡೆದ ಥಗ್ ಲೈಫ್ ಚಿತ್ರದ ಕಾರ್ಯಕ್ರಮದಲ್ಲಿ ನಟ ಕಮಲ್ ಹಾಸನ್, ತಮಿಳಿನಿಂದ ಕನ್ನಡ ಹುಟ್ಟಿದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಇದು ಕನ್ನಡಿಗರನ್ನು ಕೆರಳಿಸಿದ್ದು, ಅವರ ವಿರುದ್ಧ ಪ್ರತಿಭಟನೆ ನಡೆಸಲಾಗಿದೆ. ಬೆಂಗಳೂರಿನ ಆರ್.ಟಿ ನಗರ ಪೊಲೀಸ್ ಠಾಣೆಯಲ್ಲಿ ಪ್ರವೀಣ್ ಶೆಟ್ಟಿ ಬಣದ ಕರವೇಯಿಂದ ಪ್ರಕರಣ ದಾಖಲಿಸಲಾಗಿದೆ.
ಇನ್ನು ಈ ಕಾರ್ಯಕ್ರಮದಲ್ಲಿ ಸ್ಯಾಂಡಲ್ ವುಡ್ ಸ್ಟಾರ್ ಶಿವರಾಜಕುಮಾರ್ ಭಾಗವಹಿಸಿ ಮಾತನಾಡಿದ್ದರು. ಶಿವಣ್ಣನ ಎದುರಿನಲ್ಲೇ ನಟ ಕಮಲ್ ಹಾಸನ್ ಕನ್ನಡದ ಬಗ್ಗೆ ಇಲ್ಲದ ಸುಳ್ಳು ಮಾತನಾಡಿದ್ದಾರೆ. ಈ ಬಗ್ಗೆ ನಟ ಶಿವರಾಜಕುಮಾರ್ ಮೊದಲ ಪ್ರತಿಕ್ರಿಯೆ ನೀಡಿದ್ದು, ನಾನು ಕಮಲ್ ಹಾಸನ್ ಅವರ ದೊಡ್ಡ ಅಭಿಮಾನಿ. ಅವರಿಂದ ಸಾಕಷ್ಟು ಸ್ಪೂರ್ತಿ ಪಡೆದಿದ್ದೇನೆ. ಗೌರವದಿಂದ ಕಾರ್ಯಕ್ರಮಕ್ಕೆ ಕರೆದಿದ್ದರು. ನಾನು ಹೋಗಿದ್ದೆ. ವೇದಿಕೆ ಮೇಲೆ ಏನು ತಪ್ಪಾಗಿದೆ ಎಂದು ನನಗೆ ಗೊತ್ತಾಗಿಲ್ಲ. ಇಲ್ಲಿ ಬಂದು ನೋಡಿದರೆ ವಿವಾದ ಆಗಿದೆ. ಈ ಬಗ್ಗೆ ಏನು ಹೇಳಬೇಕೋ ಅವರೆ ಹೇಳುತ್ತಾರೆ ಎಂದಿದ್ದಾರೆ.