ಪ್ರಜಾಸ್ತ್ರ ಸಿನಿಮಾ ಡೆಸ್ಕ್
ಬೆಂಗಳೂರು: ಕನ್ನಡ ಚಿತ್ರರಂಗದ ದೊಡ್ಮನೆ ಡಾ.ರಾಜಕುಮಾರ್ ಅವರ ಮೊಮ್ಮಗ, ನಟ ರಾಘವೇಂದ್ರ ರಾಜಕುಮಾರ್ ಅವರ ಮಗ ಯುವ ಹಾಗೂ ಪತ್ನಿ ಶ್ರೀದೇವಿ ನಡುವಿನ ಕಲಹ ಕೋರ್ಟ್ ಮೆಟ್ಟಿಲು ಏರಿದ್ದು ಎಲ್ಲರಿಗೂ ಗೊತ್ತಿದೆ. ಕೌಟುಂಬಿಕ ನ್ಯಾಯಾಲಯದ ಮೂಲಕ ವಿಚ್ಛೇದನ ಪಡೆಯಲು ಈ ಜೋಡಿ ಸಜ್ಜಾಗಿದ್ದು, ವಿಚಾರಣೆಯನ್ನು ಮುಂದೂಡಿಲಾಗಿದೆ.
ಗುರುವಾರ ನಡೆದ ವಿಚಾರಣೆಯಲ್ಲಿ ಕೋರ್ಟ್ ಪ್ರಕರಣವನ್ನು ಆಗಸ್ಟ್ 23ಕ್ಕೆ ಮುಂದೂಡಿದೆ. ಇವರಿಬ್ಬರು ಒಬ್ಬರಿಗೊಬ್ಬರ ಮೇಲೆ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಈ ಮೂಲಕ ದೊಡ್ಮನೆ ಸಮಸ್ಯೆ ಕೋರ್ಟ್ ಮೆಟ್ಟಿಲು ಏರಿದೆ. ಈ ಮೂಲಕ ಯುವ ಹಾಗೂ ಶ್ರೀದೇವಿ ನಡುವಿನ ಗಲಾಟೆ ವಿಕೋಪಕ್ಕೆ ಹೋಗಿದೆ.