ಸೇನಾ ಮುಖ್ಯಸ್ಥರೊಂದಿಗೆ ರಕ್ಷಣಾ ಸಚಿವರ ಸಭೆ

279

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಅಗ್ನಿಪಥ್ ಯೋಜನೆ ವಿರೋಧಿಸಿ ದೇಶ್ಯಾದ್ಯಂತ ಪ್ರತಿಭಟನೆಗಳು ತೀವ್ರಗೊಳ್ಳುತ್ತಿವೆ. ಬಹುತೇಕ ಕಡೆ ಹಿಂಸಾಸ್ವರೂಪ ಪಡೆದುಕೊಂಡಿದೆ. ಈಗಾಗಿ ಇಂದು ಮುಂಜಾನೆ 11 ಗಂಟೆಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್, 3 ಸೇನಾ ಮುಖ್ಯಸ್ಥರೊಂದಿಗೆ ಸಭೆ ನಡೆಸಲಿದ್ದಾರೆ.

ಪ್ರತಿಭಟನೆ ನಿಯಂತ್ರಣಕ್ಕೆ ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಚರ್ಚೆ ನಡೆಸಲಿದ್ದಾರೆ. ಇನ್ನು ಉತ್ತರ ಪ್ರದೇಶ, ಬಿಹಾರ್, ಹರಿಯಾಣ್, ರಾಜಸ್ಥಾನ್, ಹಿಮಾಚಲ ಪ್ರದೇಶ, ಉತ್ತಾರಖಂಡ ಸೇರಿದಂತೆ 13 ರಾಜ್ಯಗಳಲ್ಲಿ ಪ್ರತಿಭಟನೆ ಜೋರಾಗಿದೆ. ಇಂದು ಬಿಹಾರದಲ್ಲಿ ರಾಜ್ಯವ್ಯಾಪಿ ಬಂದ್ ಗೆ ಕರೆ ನೀಡಲಾಗಿದೆ.

ಹರಿಯಾಣ, ಬಿಹಾರದಲ್ಲಿ ಕಳೆದ 24 ಗಂಟೆಯಿಂದ ಇಂಟರ್ ನೆಟ್ ಸ್ಥಗಿತಗೊಳಿಸಲಾಗಿದೆ. ಹಲವು ರಾಜ್ಯಗಳಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ.




error: Content is protected !!