Ad imageAd image

ಅಕ್ಕಮಹಾದೇವಿ ಮಹಿಳಾ ವಿವಿ ತಂಡ ಖೋ ಖೋ ಚಾಂಪಿಯನ್ಸ್

Nagesh Talawar
ಅಕ್ಕಮಹಾದೇವಿ ಮಹಿಳಾ ವಿವಿ ತಂಡ ಖೋ ಖೋ ಚಾಂಪಿಯನ್ಸ್
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಸಿಂದಗಿ(Sindagi): ಪ್ರತಿಯೊಬ್ಬರು ದೈಹಿಕವಾಗಿ ಬಲಿಷ್ಠರಾದಾಗ ಮಾತ್ರ ಮಾನಸಿಕವಾಗಿ ಏನಾದರೂ ಸಾಧಿಸಲು ಸಾಧ್ಯ. ಆದ್ದರಿಂದ ಕ್ರೀಡೆ ಅತಿ ಪ್ರಮುಖ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು. ಸಿಂದಗಿ ನಗರದ ಆರ್.ಬಿ.ಬೂದಿಹಾಳ ಕ್ರೀಡಾಂಗಣದಳ್ಳಿ ಪದ್ಮರಾಜ ವಿದ್ಯಾವರ್ಧಕ ಸಂಸ್ಥೆಯ ಪದ್ಮರಾಜ ಮಹಿಳಾ ಪದವಿ ಕಾಲೇಜು ಹಾಗೂ ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಇವರುಗಳ ಸಹಯೋಗದಲ್ಲಿ ಹಮ್ಮಿಕೊಂಡ ಅಂತರ ಮಹಾವಿದ್ಯಾಲಯಗಳ ಖೋ-ಖೋ ಪಂದ್ಯಾವಳಿ ಹಾಗೂ ವಿಶ್ವವಿದ್ಯಾಲಯ ತಂಡದ ಆಯ್ಕೆ 2025-26 ಪಾರಿತೋಷಕ ವಿತರಣಾ ಸಮಾರಂಭದಲ್ಲಿ ವಿಜೇತ ತಂಡಕ್ಕೆ ಬಹುಮಾನ ವಿತರಿಸಿ ಮಾತನಾಡಿದರು.

ಮಕ್ಕಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆಯಲ್ಲಿ ಕ್ರೀಡೆಗಳು ಮಹತ್ವದ ಪಾತ್ರ ವಹಿಸುತ್ತವೆ. ಆದ್ದರಿಂದ ವಿದ್ಯಾರ್ಥಿಗಳು ಪಾಠದೊಂದಿಗೆ ಆಟದಲ್ಲಿಯೂ ಸಹ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಹೀಗಾಗಿ ವಿದ್ಯಾರ್ಥಿಗಳು ಕ್ರೀಡೆಗಳಲ್ಲಿ ಸ್ಪರ್ಧಾಸ್ಫೂರ್ತಿಯಿಂದ ಭಾಗವಹಿಸಬೇಕು ಎಂದರು.

ಇದೇ ಸಂದರ್ಭದಲ್ಲಿ ಮಹಿಳಾ ವಿವಿ ದೈಹಿಕ ಶಿಕ್ಷಣ ನಿರ್ದೇಶನಾಲಯ ಸಹಾಯಕ ನಿರ್ದೇಶಕ ಡಾ.ವಿಶ್ವನಾಥ ನಡಕಟ್ಟಿ, ಆಯ್ಕೆ ಸಮಿತಿ ಸದಸ್ಯ ಮಹಾಂತೇಶ ಲಾಯದಗುಂದಿ, ಶಿವಪ್ರಸಾದ ಎಲಿ ಹಾಗೂ ಶ್ರೀನಿವಾಸ, ಪುರಸಭೆ ಮಾಜಿ ಸದಸ್ಯ ರಾಜಶೇಖರ ಕೂಚಬಾಳ ಮಾತನಾಡಿದರು. ಕಾರ್ಯಕ್ರಮದ ಸಾನಿಧ್ಯ ವಹಿಸಿದ ಸಾರಂಗಮಠದ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ಆಶೀರ್ವಚನ ನೀಡಿದರು. ಖೋ-ಖೋ ಪಂದ್ಯಾವಳಿಯಲ್ಲಿ ಅಕ್ಕಮಹಾದೇವಿ ಮಹಿಳಾ ವಿವಿ ತಂಡ ಪ್ರಥಮ ಸ್ಥಾನ ಪಡೆದು ಚಾಂಪಿಯನ್ ಆಗಿ ಹೊರ ಹೊಮ್ಮಿತು. ಕೆಎಲ್‌ಇ ರಾಜರಾಜೇಶ್ವರಿ ಕಲಾ ಹಾಗೂ ವಾಣಿಜ್ಯ ಮಹಿಳಾ ಪದವಿ ಮಹಾವಿದ್ಯಾಲಯ ತಂಡ ದ್ವಿತೀಯ ಸ್ಥಾನ (ರನ್ನರ್) ಪಡೆದುಕೊಂಡಿತು.

ಕಾರ್ಯಕ್ರಮದಲ್ಲಿ ರವಿ ಗೋಲಾ, ಭೀಮನಗೌಡ ಸಿಂಗನಳ್ಳಿ, ವ್ಹಿ.ಡಿ.ಪಾಟೀಲ, ಕೆ.ಹೆಚ್.ಸೋಮಾಪುರ, ಎಸ್.ಎಸ್.ಸಂಗಮ, ಗವಿಸಿದ್ದಪ್ಪ ಆನೆಗುಂದಿ, ನೀಲಕಂಠ ಗೋಡೇಕರ, ಗುರು ಕುಳೆಕುಮಟಗಿ, ಎಂ.ಕೆ.ಬಿರಾದಾರ, ಸಿದ್ಧಲಿಂಗ ಚೌಧರಿ, ಎಂ.ಎಂ.ಕೆಂಭಾವಿ, ಬಿ.ಜಿ.ಅವಟಿ, ಉಪನ್ಯಾಸಕರಾದ ಎಸ್.ಎಸ್.ಕಲಶೆಟ್ಟಿ, ಮಹಾಂತೇಶ ನೂಲಾನವರ, ಜಿ.ಎಸ್.ಕುಲಕರ್ಣಿ, ಯು.ಸಿ.ಪೂಜೇರಿ, ಎಸ್.ಸಿ.ದುದ್ದಗಿ, ಎ.ಆರ್.ರಜಪೂತ, ಎಸ್.ಎನ್.ಕುಂದಗೋಳ, ಎಂ.ಕೆ.ಬಿರಾದಾರ, ಭಾಗ್ಯ ಬಬಲೇಶ್ವರ, ಭಾಗ್ಯಶ್ರೀ ನಂದಿಮಠ, ನೀಲಮ್ಮ ಬಿರಾದಾರ, ಡಿ.ಎಂ.ಪಾಟೀಲ, ಮಂಗಳಾ ಈಳಗೇರ, ಮಮತಾ ಹರನಾಳ, ಶಿವಶಂಕರ ಕುಂಬಾರ, ಜಿ.ಎ.ನಂದಿಮಠ ಹೇಮಾ ಹಿರೇಮಠ ಸೇರಿದಂತೆ ಕಾಲೇಜಿನ ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಇದ್ದರು.

WhatsApp Group Join Now
Telegram Group Join Now
Share This Article