Ad imageAd image

ಅರ್ಧ ಪಾಕಿಸ್ತಾನ ಹೇಳಿಕೆ: ಶಾಸಕ ಯತ್ನಾಳಗೆ ಸಮನ್ಸ್

ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅನುಮತಿ ನೀಡಿದೆ.

Nagesh Talawar
ಅರ್ಧ ಪಾಕಿಸ್ತಾನ ಹೇಳಿಕೆ: ಶಾಸಕ ಯತ್ನಾಳಗೆ ಸಮನ್ಸ್
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ(basangouda patil yatnal) ಯತ್ನಾಳ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅನುಮತಿ ನೀಡಿದೆ. ನ್ಯಾಯಾಧೀಶರಾದ ಕೆ.ಎಂ ಶಶಿಕುಮಾರ್ ಅವರು ಯತ್ನಾಳಗೆ ಸಮನ್ಸ್ ಜಾರಿಗೊಳಿಸಲು ಆದೇಶಿಸಿದ್ದಾರೆ. ಹೀಗಾಗಿ ಯತ್ನಾಳಗೆ ಸಂಕಷ್ಟ ಎದುರಾಗಿದೆ.

ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನೆಯಲ್ಲಿ ಅರ್ಧಪಾಕಿಸ್ತಾನವಿದೆ ಎಂದು ಯತ್ನಾಳ ಹೇಳಿಕೆ ಕೊಟ್ಟಿದ್ದರು. ಇದರ ವಿರುದ್ಧ ಗುಂಡೂರಾವ್ ಪತ್ನಿ ತಬಸ್ಸುಮ್(tabassum gundu rao) ಗುಂಡೂರಾವ್ ದೂರು ದಾಖಲಿಸಿದ್ದಾರೆ. ನನ್ನನ್ನು ದೇಶವಿರೋಧಿ ಹೇಳಿರುವ ಯತ್ನಾಳ ಅವರ ಮಾತಿನಿಂದ ನನಗೆ ನೋವಾಗಿದೆ. ಅವರ ವಿರುದ್ಧ ಐಪಿಸಿ 1860 ಕಲಂ 499 ಹಾಗೂ 500 ಅಡಿಯಲ್ಲಿ ದೂರು ದಾಖಲಿಸಲು ಏಪ್ರಿಲ್ 15, 2024ರಂದು ನಿರ್ದೇಶನ ಕೋರಿದ್ದರು. ಈಗ ಕೋರ್ಟ್ ಆರೋಪಿ ವಿರುದ್ಧ ದೂರು ದಾಖಲಿಸಲು ಆದೇಶಿಸಿದೆ.

WhatsApp Group Join Now
Telegram Group Join Now
Share This Article