ಪ್ರಜಾಸ್ತ್ರ ಸುದ್ದಿ
ನವದೆಹಲಿ(New Delhi): ದೆಹಲಿಯಲ್ಲಿ ಸ್ಫೋಟಕ್ಕೆ ಸಂಚು ರೂಪಿಸಿದ್ದ ಬಾಂಗ್ಲಾದೇಶ ಮೂಲದವರು ಸೇರಿದಂತೆ 8 ಶಂಕಿತ ಉಗ್ರರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. 6 ಮಂದಿಯನ್ನು ತಮಿಳುನಾಡಿ ಬೇರೆ ಬೇರೆ ಭಾಗಗಳಲ್ಲಿ ಬಂಧಿಸಲಾಗಿದೆ. ವಿಚಾರಣೆಗಾಗಿ ದೆಹಲಿಗೆ ಕರೆದುಕೊಂಡು ಬರಲಾಗುತ್ತಿದೆಯಂತೆ.
ಪಾಕಿಸ್ತಾನದ ಲಷ್ಕರ್ ಎ ತಯ್ಯಾಬಾ ಉಗ್ರ ಸಂಘಟನೆ ಹಾಗೂ ಬಾಂಗ್ಲಾದೇಶದ ಉಗ್ರ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿದ್ದರು ಎನ್ನಲಾದ 8 ಶಂಕಿತರನ್ನು ಬಂಧಿಸಲಾಗಿದೆ. ಭಾರತದ ಪ್ರಮುಖ ಧಾರ್ಮಿಕ ಸ್ಥಳದಲ್ಲಿ ವಿಧ್ವಂಸಕ ಕೃತ್ಯಗಳನ್ನು ನಡೆಸಲು ಸಂಚು ರೂಪಸಿದ್ದರು ಎಂದು ಗುಪ್ತಚರ ಮೂಲಕ ಮಾಹಿತಿ ಬಂದಿತ್ತು. ಹೀಗಾಗಿ ಕೆಂಪು ಕೋಟೆ ಸುತ್ತಮುತ್ತ ಕಟ್ಟೆಚ್ಚರ ವಹಿಸಲಾಗಿತ್ತು.




