ಪ್ರಜಾಸ್ತ್ರ ಸುದ್ದಿ
ತುಮಕೂರು(Tumakoru): ಜಿಲ್ಲೆಯ ಪಾವಗಡ ಪಟ್ಟಣದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ್(59) ಕಚೇರಿಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ತಮ್ಮ ಸಾವಿಗೆ ಜಂಟಿ ನಿರ್ದೇಶಕರಾದ ಕೃಷ್ಣಪ್ಪ ಕಾರಣವೆಂದು ಡೆತ್ ನೋಟ್ ಬರೆದಿದ್ದಾರೆ ಎಂದು ಹೇಳಲಾಗುತ್ತಿದೆ.
ನನ್ನ ತಾಯಿ, ಪತ್ನಿ, ಮಕ್ಕಳು ನನ್ನನ್ನು ಚೆನ್ನಾಗಿ ನೋಡಿಕೊಂಡಿದ್ದಾರೆ. ಆದರೆ, ಮೇಲಾಧಿಕಾರಿ ನೀಡಿದ ಕಿರುಕುಳದಿಂದ ಈ ನಿರ್ಧಾರಕ್ಕೆ ಬಂದಿದ್ದೇನೆ ಎಂದು ವಿಡಿಯೋದಲ್ಲಿ ಹೇಳಿದ್ದಾರಂತೆ. ಸಂಜೆ ಎಲ್ಲ ಸಿಬ್ಬಂದಿ ತೆರಳಿದ ಬಳಿಕ ಕಚೇರಿಯಲ್ಲೇ ನೇಣು ಹಾಕಿಕೊಂಡಿದ್ದಾರೆ. ಪಾವಗಡ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಕೈಗೊಂಡಿದ್ದಾರೆ.




