Ad imageAd image

ರೇಣುಕಾಸ್ವಾಮಿ ಕೊಲೆ ಪ್ರಕರಣದ ಜಾಮೀನು ಅರ್ಜಿ ವಿಚಾರಣೆ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಎಂಬಾತನ ಕೊಲೆ ಪ್ರಕರಣದಲ್ಲಿ ಕಳೆದ ನೂರು ದಿನಗಳಿಂತ ಹೆಚ್ಚು ದಿನಗಳಿಂದ ಬೇರೆ ಬೇರೆ ಜೈಲುಗಳಲ್ಲಿ ನಟ ದರ್ಶನ್,

Nagesh Talawar
ರೇಣುಕಾಸ್ವಾಮಿ ಕೊಲೆ ಪ್ರಕರಣದ ಜಾಮೀನು ಅರ್ಜಿ ವಿಚಾರಣೆ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ(Renukaswamy) ಎಂಬಾತನ ಕೊಲೆ ಪ್ರಕರಣದಲ್ಲಿ ಕಳೆದ ನೂರು ದಿನಗಳಿಂತ ಹೆಚ್ಚು ದಿನಗಳಿಂದ ಬೇರೆ ಬೇರೆ ಜೈಲುಗಳಲ್ಲಿ ನಟ ದರ್ಶನ್, ಆಪ್ತ ಗೆಳತಿ ಪವಿತ್ರಾಗೌಡ ಸೇರಿದಂತೆ 17 ಆರೋಪಿಗಳಲ್ಲಿ 16ನೇ ಆರೋಪಿಗೆ ಜಾಮೀನು ಮಂಜೂರು ಮಾಡಲಾಗಿದೆ. ಆರೋಪಿ ಕೇಶವಮೂರ್ತಿ ಎಂಬಾತನಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಈತನ ವಿರುದ್ಧ ಸಾಕ್ಷ್ಯನಾಶದ ಪ್ರಕರಣ ದಾಖಲಿದೆ. ಈತನ ವಿರುದ್ಧ ಕೊಲೆ ಪ್ರಕರಣ ದಾಖಲಾಗಿಲ್ಲ. ಜಾಮೀನು(Bail) ಅರ್ಜಿಯ ಕುರಿತು ಇಂದು ವಿಚಾರಣೆ ನಡೆಸಿದ ಕೋರ್ಟ್ ಷರತ್ತುಬದ್ಧ ಜಾಮೀನು ನೀಡಲಾಗಿದೆ. ಇವರ ಪರ ವಕೀಲರಾದ ರಂಗನಾಥ್ ರೆಡ್ಡಿ ವಕಾಲತ್ತು ವಹಿಸಿದ್ದರು. ಕಾರ್ತಿಕ್ ಹಾಗೂ ನಿಖಿಲ್ ಆರೋಪಿಗಳ ಜಾಮೀನು ಸಹ ಬಾಕಿಯಿದೆ. ಈ ಮೂವರು ವಿಚಾರಗಳು ಸಾಮ್ಯತೆಯಿದೆ ಎಂದು ಹೇಳಲಾಗುತ್ತಿದೆ.

ಇನ್ನು ಎ1 ಪವಿತ್ರಾಗೌಡ ಹಾಗೂ ಎ2 ನಟ ದರ್ಶನ್(Darshan) ಅವರ ಜಾಮೀನು ಅರ್ಜಿಯನ್ನು ಮುಂದೂಡಿಕೆ ಮಾಡಲಾಗಿದೆ. ಪವಿತ್ರಾಗೌಡ(Pvaitragoud) ಜಾಮೀನು ಅರ್ಜಿ ವಿಚಾರಣೆ ಸೆಪ್ಟೆಂಬರ್ 25ಕ್ಕೆ, ನಟ ದರ್ಶನ್ ಅರ್ಜಿ 27ಕ್ಕೆ ಮುಂದೂಡಿಕೆ ಮಾಡಲಾಗಿದೆ. ಪ್ರಾಸಿಕ್ಯೂಷನ್ ಪರ ವಕೀಲರು ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕೇಳಿದ್ದಾರೆ. ಹೀಗಾಗಿ ಇವರ ಜಾಮೀನು ಅರ್ಜಿ ವಿಚಾರಣೆ ಮುಂದೂಡಲಾಗಿದೆ.

WhatsApp Group Join Now
Telegram Group Join Now
Share This Article