ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಬುಧವಾರ ಸಂಜೆ ಬೆಂಗಳೂರಿನಲ್ಲಿ ಆರ್ ಸಿಬಿ ವಿಜಯೋತ್ಸವದ ವೇಳೆ ನಡೆದ ದುರಂತಕ್ಕೆ ಸಂಬಂಧಿಸಿದಂತೆ ವಿರಾಟ್ ಕೊಹ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಆರ್ ಸಿಬಿ ಹಂಚಿಕೊಂಡಿರುವ ಪೋಸ್ಟ್ ಅನ್ನು ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡು, ಮಾತು ಬಾರದಾಗಿದೆ. ಹೃದಯ ಒಡೆದಿದೆ ಎಂದು ಬರೆದುಕೊಂಡಿದ್ದಾರೆ. ಈ ಘಟನೆಗೆ ಇಡೀ ದೇಶ್ಯಾದ್ಯಂತ ಸಂತಾಪ ಸೂಚಿಸಲಾಗಿದೆ.
ಕಾಲ್ತುಳಿತದಲ್ಲಿ ಮೃತಪಟ್ಟ ಕುಟುಂಬಸ್ಥರಿಗೆ ಆರ್ ಸಿಬಿ ಹಾಗೂ ಕೆಎಸ್ ಸಿಎ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಕಳೆದ ರಾತ್ರಿ ಪ್ರಕಟಿಸಿದೆ. ಆದರೆ, ಇಂತಹದೊಂದು ದುರಂತ ನಡೆಯುತ್ತದೆ ಎಂದು ಯಾರೂ ನಿರೀಕ್ಷಿಸಿರಲಿಲ್ಲ. ತರಾತುರಿಯಲ್ಲಿ ಸರ್ಕಾರ ಆಯೋಜಿಸಿದ ಕಾರ್ಯಕ್ರಮ ಹಾಗೂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಯೋಜನೆಗೊಂಡ ಕಾರ್ಯಕ್ರಮ ಕಾರಣವಾಗಿದ್ದು, ಹುಚ್ಚು ಅಭಿಮಾನಕ್ಕೆ 11 ಜೀವಗಳು ಬಲಿಯಾಗಿವೆ. 50ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.