Ad imageAd image

ಕುಂಭಮೇಳಕ್ಕೆ ಹೊರಟಿದ್ದ ಬೆಳಗಾವಿ ವಾಹನ ಅಪಘಾತ, 6 ಸಾವು

Nagesh Talawar
ಕುಂಭಮೇಳಕ್ಕೆ ಹೊರಟಿದ್ದ ಬೆಳಗಾವಿ ವಾಹನ ಅಪಘಾತ, 6 ಸಾವು
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಬೆಳಗಾವಿ(Belagavi): ಬೆಳಗಾವಿಯಿಂದ 19 ಜನರ ತಂಡ ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭಳಕ್ಕೆ ಹೊರಟಿದ್ದ ವಾಹನ ಅಪಘಾತಗೊಂಡಿದೆ. ಇದರಲ್ಲಿ ನಾಲ್ವರು ಹಾಗೂ ಸ್ಥಳೀಯ ಬೈಕ್ ಸವಾರರಿಬ್ಬರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಶುಕ್ರವಾರ ಮುಂಜಾನೆ ಈ ಘಟನೆ ನಡೆದಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಗಾವಿಯ ಗಣೇಶಪುರದ ನಿವಾಸಿಗಳಾದ ನೀತಾ, ಸಾಗರ ಮೃತರೆಂದು ತಿಳಿದು ಬಂದಿದೆ. ಇನ್ನುಬ್ಬರು ಹಾಗೂ ಸ್ಥಳೀಯರಿಬ್ಬರ ಮಾಹಿತಿ ತಿಳಿದು ಬರಬೇಕಿದೆ.

ಮಧ್ಯಪ್ರದೇಶದ ಇಂದೊರ್ ಮಾಣಪುರ ಹತ್ತಿರ ಅಪಘಾತ ಸಂಭವಿಸಿದೆ. ಬೆಳಗಾವಿ ಸಂಸದ ಜಗದೀಶ್ ಶೆಟ್ಟರ್ ಗೆ ಈ ಬಗ್ಗೆ ಮಾಹಿತಿ ನೀಡಲಾಗಿದೆಯಂತೆ. ಅಲ್ಲಿನ ಬಿಜೆಪಿ ಜಿಲ್ಲಾಧ್ಯಕ್ಷರು ಗಾಯಾಳುಗಳ ಆರೋಗ್ಯದ ಬಗ್ಗೆ ವಿಚಾರಿಸಿದ್ದಾರೆ ಎಂದು ತಿಳಿದು ಬಂದಿದೆ. ಇದರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಅಂತಾ ಎಂಜಿಎಂ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

WhatsApp Group Join Now
Telegram Group Join Now
Share This Article