Ad imageAd image

ಬಂಗಾಳ, ಅಸ್ಸಾಂ ಸ್ಥಿತಿ ರಾಜ್ಯಕ್ಕೂ ಬರಲಿದೆ: ಆರ್.ಅಶೋಕ್

ಬಿಜೆಪಿ ಕಚೇರಿ ಸ್ಫೋಟಿಸಲು ಉಗ್ರರು ಸಂಚು ರೂಪಿಸಿದ್ದರು ಎನ್ನುವುದು ಬಯಲಿಗೆ ಬಂದಿದೆ. ರಾಜ್ಯ ಸರ್ಕಾರ ಟಾಸ್ಕ್ ಪೋರ್ಸ್ ರಚಿಸಿ ತಕ್ಷಣ ಕ್ರಮ ತೆಗೆದುಕೊಳ್ಳಬೇಕು.

Nagesh Talawar
ಬಂಗಾಳ, ಅಸ್ಸಾಂ ಸ್ಥಿತಿ ರಾಜ್ಯಕ್ಕೂ ಬರಲಿದೆ: ಆರ್.ಅಶೋಕ್
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ಬಿಜೆಪಿ ಕಚೇರಿ ಸ್ಫೋಟಿಸಲು ಉಗ್ರರು ಸಂಚು ರೂಪಿಸಿದ್ದರು ಎನ್ನುವುದು ಬಯಲಿಗೆ ಬಂದಿದೆ. ರಾಜ್ಯ ಸರ್ಕಾರ ಟಾಸ್ಕ್ ಪೋರ್ಸ್ ರಚಿಸಿ ತಕ್ಷಣ ಕ್ರಮ ತೆಗೆದುಕೊಳ್ಳಬೇಕು. ಬಾಂಗ್ಲಾ ಪ್ರಜೆಗಳು ಬೆಂಗಳೂರಿಗೆ ನುಸುಳುತ್ತಿದ್ದಾರೆ. ಇವರನ್ನು ಪತ್ತೆ ಮಾಡಿ ಹೊರಕ್ಕೆ ಹಾಕಬೇಕು. ಇಲ್ಲದಿದ್ದರೆ ಬಂಗಾಳ, ಅಸ್ಸಾಂ ಸ್ಥಿತಿ ರಾಜ್ಯಕ್ಕೂ ಬರಲಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್(R Ashoka) ಹೇಳಿದ್ದಾರೆ.

ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆಧಾರ್ ಕಾರ್ಡ್(Aadharcard) ಪಡೆದು ಬಾಂಗ್ಲಾದೇಶದವರು ಬೆಂಗಳೂರಿಗೆ ಬರುತ್ತಿದ್ದಾರೆ. ಇದರಿಂದ ಭಯೋತ್ಪಾದಕ ಚಟುವಟಿಕೆಗಳು ಹೆಚ್ಚುತ್ತಿವೆ. ಕಾಂಗ್ರೆಸ್ ಪರಿಷತ್ ಸದಸ್ಯರೊಬ್ಬರು ಬಾಂಗ್ಲಾ ಮಾದರಿಯಲ್ಲಿ ಹಲ್ಲೆ ಮಾಡುವ ಬೆದರಿಕೆ ಹಾಕಿದ್ದರು. ವಿಧಾನಸೌಧದಲ್ಲೇ ಪಾಕಿಸ್ತಾನ್ ಜಿಂದಾಬಾದ್ ಎಂದು ಘೂಷಣೆ ಕೂಗಿದರು ಕಾಂಗ್ರೆಸ್ ನಿರಾಕರಿಸಿತು. ಇದು ಭಯೋತ್ಪಾದಕರಿಗೆ(Terrorist) ಪ್ರೇರಣೆಯಾಗುತ್ತಿದೆ. ಇಲ್ಲಿ ಏನು ಮಾಡಿದರೂ ನಡೀತದೆ ಎನಿಸಿದೆ. ಹೀಗಾಗಿ ಉಗ್ರ ಚಟುವಟಿಕೆಗಳು ಹೆಚ್ಚಾಗುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

WhatsApp Group Join Now
Telegram Group Join Now
Share This Article