ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಅಬಕಾರಿ ಸಚಿವ ಆರ್.ಬಿ ತಿಮ್ಮಾಪುರ ರಾಜೀನಾಮೆಗೆ ವಿಪಕ್ಷಗಳಾದ ಬಿಜೆಪಿ, ಜೆಡಿಎಸ್ ಪಟ್ಟು ಹಿಡಿದಿವೆ. ಹೀಗಾಗಿ ಮಂಗಳವಾರ ರಾತ್ರಿ ಸದನದಲ್ಲಿ ಅಹೋರಾತ್ರಿ ಧರಣಿ ನಡೆಸಿದ್ದಾರೆ. ರಾತ್ರಿ ಊಟವಾದ ಬಳಿಕ ಸದನದಲ್ಲಿ ಧರಣಿ ನಡೆಸಿದರು. ಇವರನ್ನು ಸಭಾಪತಿ ಯು.ಟಿ ಖಾದರ್ ಮಾತನಾಡಿ ಹೋದರು.
ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರದ ಆರೋಪದ ಬಗ್ಗೆ ಸಂಜೆ ಉತ್ತರ ನೀಡುವುದಾಗಿ ಸರ್ಕಾರ ಹೇಳಿತ್ತು. ಆದರೆ, ವಿಬಿ ಜಿ ರಾಮ ಜಿ ಬಗ್ಗೆ ನಿರ್ಣಯ ತೆಗೆದುಕೊಳ್ಳಲಾಯಿತು. ನಿರ್ಣಯದ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚರ್ಚೆ ಪ್ರಾರಂಭಿಸಿದರು. ಬಿಜೆಪಿ, ಜೆಡಿಎಸ್ ಸದಸ್ಯ ಗದ್ದಲ ಶುರು ಮಾಡಿದರು. ಅಲ್ಲದೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲವೆಂದು ಸಚಿವ ಆರ್.ಬಿ ತಿಮ್ಮಾಪುರ ಹೇಳಿದರು. ಇದು ಮತ್ತಷ್ಟು ಗದ್ದಲಕ್ಕೆ ಕಾರಣವಾಯಿತು. ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಸಚಿವ ಆರ್.ಬಿ ತಿಮ್ಮಾಪುರ ರಾಜೀನಾಮೆಗೆ ವಿಪಕ್ಷಗಳು ಪಟ್ಟು ಹಿಡಿದಿವೆ.




