ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಮುಡಾ(MUDA) ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಹಾಗೂ ಜೆಡಿಎಸ್(BJP JDS) ಮೈತ್ರಿ ಪಡೆ ಪಾದಯಾತ್ರೆ ನಡೆಸಲು ಸಜ್ಜಾಗಿವೆ. ಇದಕ್ಕೆ ಸಂಬಂಧಿಸಿದಂತೆ ಭಾನುವಾರ ಸಭೆ ನಡೆಸಿ ರೂಪರೇಷಗಳನ್ನು ಸಿದ್ಧಪಡಿಸಲಾಗಿದೆ. ಅಕ್ಟೋಬರ್ 3ರಂದು ಬೆಂಗಳೂರಿನಿಂದ ಪಾದಯಾತ್ರೆ ಪ್ರಾರಂಭಿಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ. ಖಾಸಗಿ ಹೋಟೆಲ್ ನಲ್ಲಿ ನಡೆದ ಸಭೆಯ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು.
ಬೆಂಗಳೂರಿನಿಂದ ಮೈಸೂರು(Bengaloru-Mysore) ತನಕ ಪಾದಯಾತ್ರೆ ನಡೆಯಲಿದೆ. ರಾಜ್ಯದ ಎಲ್ಲ ಭಾಗಗಳಿಂದ ಬಿಜೆಪಿ, ಜೆಡಿಎಸ್ ಮುಖಂಡರು, ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಆಗಸ್ಟ್ 10ರಂದು ಮೈಸೂರಿನಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ ಎಂದರು. ಸಭೆಯಲ್ಲಿ ಬಿಜೆಪಿ ಮಾಜಿ ಸಿಎಂ ಯಡಿಯೂರಪ್ಪ(BSY), ಕೇಂದ್ರ ಸಚಿವರಾದ ಹೆಚ್.ಡಿ ಕುಮಾರಸ್ವಾಮಿ(HDK), ಪ್ರಹ್ಲಾದ್ ಜೋಶಿ, ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ ಸೇರಿ ಸಂಸದರು, ಶಾಸಕರು ಭಾಗವಹಿಸಿದ್ದರು.