Ad imageAd image

ಬಿಜೆಪಿ ಶಾಸಕ ಮುನಿರತ್ನ ಮತ್ತೆ ಬಂಧನ

ಗುತ್ತಿಗೆದಾರನಿಗೆ ಕೊಲೆ ಬೆದರಿಕೆ, ಜಾತಿ ನಿಂದನೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ನ್ಯಾಯಾಂಗ ಬಂಧನದಲ್ಲಿದ್ದ ಬಿಜೆಪಿ ಶಾಸಕ ಮುನಿರತ್ನಗೆ ಷರತ್ತುಬ್ಧ ಜಾಮೀನು ಸಿಕ್ಕಿದೆ.

Nagesh Talawar
ಬಿಜೆಪಿ ಶಾಸಕ ಮುನಿರತ್ನ ಮತ್ತೆ ಬಂಧನ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ಗುತ್ತಿಗೆದಾರನಿಗೆ ಕೊಲೆ ಬೆದರಿಕೆ, ಜಾತಿ ನಿಂದನೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ನ್ಯಾಯಾಂಗ ಬಂಧನದಲ್ಲಿದ್ದ ಬಿಜೆಪಿ ಶಾಸಕ ಮುನಿರತ್ನಗೆ(Munirathna) ಷರತ್ತುಬ್ಧ ಜಾಮೀನು ಸಿಕ್ಕಿದೆ. ಹೀಗಾಗಿ ಇಂದು ಜೈಲಿನಿಂದ ಹೊರ ಬರುತ್ತಿಲೇ ಅತ್ಯಾಚಾರ(Rape Case) ಪ್ರಕರಣದಲ್ಲಿ ಬಂಧಿಸಲಾಯಿತು. ರಾಮನಗರ ಜಿಲ್ಲೆ ಕಗ್ಗಲಿಪುರ ಠಾಣೆ ಪೊಲೀಸರು ಮುನಿರತ್ನರನ್ನು ಬಂಧಿಸಿ ಕರೆದುಕೊಂಡು ಹೋದರು.

ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದರು. ಅವರ ಪರ ವಕೀಲರು ಜಾಮೀನು(Bail) ಪೇಪರ್ ಜೈಲಿನ ಅಧಿಕಾರಿಗಳಿಗೆ ನೀಡಿ ಪ್ರಕ್ರಿಯೆಗಳನ್ನು ಮುಗಿಸಿಕೊಂಡು ಹೊರಗೆ ಕರೆದುಕೊಂಡು ಬಂದರು. ಕಳೆದ ರಾತ್ರಿಯಿಂದಲೇ ಜೈಲು ಹತ್ತಿರ ಉಳಿದುಕೊಂಡಿದ್ದ ರಾಮನಗರ ಪೊಲೀಸರು ಇವರನ್ನು ವಶಕ್ಕೆ ಪಡೆದು ಕರೆದುಕೊಂಡು ಹೋದರು.

WhatsApp Group Join Now
Telegram Group Join Now
Share This Article