ಪ್ರಜಾಸ್ತ್ರ ಸುದ್ದಿ
ಕೊಡಗು(Kodagu): ಜಿಲ್ಲಾ ನ್ಯಾಯಾಲಯದ ಕಟ್ಟಡದಲ್ಲಿ ಬಾಂಬ್ ಇಡಲಾಗಿದೆ ಎಂದು ಇ-ಮೇಲ್ ಮೂಲಕ ಬೆದರಿಕೆ ಹಾಕಲಾಗಿದೆ. ಹೀಗಾಗಿ ಸೋಮವಾರ ಬಾಂಬ್ ನಿಷ್ಕ್ರೀಯ ದಳ, ಶ್ವಾನದಳ ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಲಾಗುತ್ತಿದೆ. ವಕೀಲರನ್ನು ಸಾರ್ವಜನಿಕರನ್ನು ಕೋರ್ಟ್ ಆವರಣದಿಂದ ಹೊರಗೆ ಕಳಿಸಿದ್ದು, ತಪಾಸಣೆ ನಡೆಸಲಾಗುತ್ತಿದೆ.
ಯಾರು ಈ ರೀತಿಯಾಗಿ ಬೆದರಿಕೆ ಮೇಲ್ ಮಾಡಿದ್ದಾರೆ, ಎಲ್ಲಿಂದ ಮಾಡಲಾಗಿದೆ. ಇದರ ಹಿಂದೆ ಇರುವವರು ಯಾರು ಅನ್ನೋದು ಸೇರಿದಂತೆ ಎಲ್ಲ ರೀತಿಯಿಂದ ತನಿಖೆ ನಡೆಸಲಾಗುತ್ತಿದೆ. ಬಾಂಬ್ ಇಡಲಾಗಿದೆ ಅನ್ನೋ ಬೆದರಿಕೆಯ ಮೇಲ್ ನಿಂದ ಸಾರ್ವನಿಕರಲ್ಲಿ ಆತಂಕ ಮೂಡಿದೆ.




