ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಬಿಎಂಟಿಸಿ ಬಸ್ ಡಿಕ್ಕಿಯಾದ ಪರಿಣಾಮ ಬೈಕ್ ಸವಾರನೊಬ್ಬ ಭೀಕರವಾಗಿ ಮೃತಪಟ್ಟಿರುವ ಘಟನೆ ಭಾನುವಾರ ನಡೆದಿದೆ. ಹೆಬ್ಬಾಳದ ಕಲ್ಯಾಣನಗರದಲ್ಲಿ ಅಪಘಾತ ನಡೆದಿದೆ. ಬೈಕ್ ಸವಾರನ ತಲೆ ಮೇಲೆಯೇ ಬಸ್ ಹರಿದಿದೆ. ಬೈಕ್ ನಲ್ಲಿ ಪತಿ, ಪತ್ನಿ ಹಾಗೂ ಮಕ್ಕಳು ತೆರಳುತ್ತಿದ್ದರು.
ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಹಾಗೂ ಬೈಕ್ ನಡುವೆ ಅಪಘಾತ ನಡೆದಿದೆ. ಭೀಕರ ಅಪಘಾತ ಕಂಡು ಜನರು ಬೆಚ್ಚಿ ಬಿದ್ದಿದ್ದಾರೆ. ಪತ್ನಿ ಹಾಗೂ ಮಕ್ಕಳಿಗೆ ಗಾಯಗಳಾಗಿವೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಬಿಎಂಟಿಸಿ ಬಸ್ ಗಳಿಗೆ ಸದಾ ಒಬ್ಬರಲ್ಲ ಒಬ್ಬರು ಬಲಿಯಾಗುತ್ತಿರುವುದು ನಿಜಕ್ಕೂ ದುರಂತ.