ಪ್ರಜಾಸ್ತ್ರ ಸುದ್ದಿ
ಕೋಲಾರ(Kolara): ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮರಕ್ಕೆ ಡಿಕ್ಕಿಯಾಗಿ ಇಬ್ಬರು ಮೃತಪಟ್ಟ ಘಟನೆ ರಾಮಸಂದ್ರ ಗೇಟ್ ಹತ್ತಿರ ಶನಿವಾರ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 75ರಲ್ಲಿ ವೇಗವಾಗಿ ಬಂದ ಸ್ವಿಫ್ಟ್ ಡಿಸೈರ್ ಕಾರು ಚಾಲಕನ ನಿಯಂತ್ರಣಕ್ಕೆ ಸಿಗದೆ ಮರಕ್ಕೆ ಡಿಕ್ಕಿ ಹೊಡೆದಿದೆ. ಹೀಗಾಗಿ ಕಾರಲ್ಲಿದ್ದ ಇಬ್ಬರು ಮೃತಪಟ್ಟಿದ್ದಾರೆ.
ಶಂಕರಪ್ಪ ಹಾಗೂ ವಿಶ್ವನಾಥ್ ಎಂಬುವರು ಮೃತ ದುರ್ದೈವಿಗಳು. ಇವರು ಮುಳಬಾಗಿಲು ತಾಲೂಕಿನ ನಾಗಮಂಗಲದವರೆಂದು ತಿಳಿದು ಬಂದಿದೆ. ವೇಮಗಲ್ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.