Ad imageAd image

ಸಾಲ ಪಡೆದು ವಂಚನೆ, ನಿರ್ಮಾಪಕ ಸೂರಪ್ಪ ಬಾಬು ವಿರುದ್ಧ ಕೇಸ್

Nagesh Talawar
ಸಾಲ ಪಡೆದು ವಂಚನೆ, ನಿರ್ಮಾಪಕ ಸೂರಪ್ಪ ಬಾಬು ವಿರುದ್ಧ ಕೇಸ್
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ನಟ ಶಿವರಾಜಕುಮಾರ್, ಗಣೇಶ್ ಅವರೊಂದಿಗೆ ಸಿನಿಮಾ ಮಾಡುತ್ತಿರುವುದಾಗಿ ಹೇಳಿ 92.50 ಲಕ್ಷ ರೂಪಾಯಿ ಸಾಲ ಪಡೆದು ವಾಪಸ್ ಕೊಡದೆ ವಂಚಿಸಿದ್ದಾರೆ ಎಂದು ನಿರ್ಮಾಪಕ ಸೂರಪ್ಪ ಬಾಬು ವಿರುದ್ಧ ಕೇಸ್ ದಾಖಲಾಗಿದೆ. ತಲಕಾವೇರಿ ಲೇಔಟ್ ನಿವಾಸಿ ಎಚ್.ಜಿ ಲಕ್ಷ್ಮಿ ಎಂಬುವರು ನೀಡಿದ ದೂರು ಆಧಾರದ ಮೇಲೆ ಪ್ರಕರಣ ದಾಖಲಿಸಕೊಳ್ಳಲಾಗಿದೆ.

ನಟರಾದ ಶಿವರಾಜಕುಮಾರ್, ಗಣೇಶ್ ಅವರನ್ನು ಹಾಕಿಕೊಂಡು ಪ್ರೊಡಕ್ಷನ್ ನಂಬರ್ 6 ಸಿನಿಮಾ ಮಾಡುತ್ತಿರುವುದಾಗಿ ಹೇಳಿ ಹಂತ ಹಂತವಾಗಿ 92.50 ಲಕ್ಷ ರೂಪಾಯಿ ಸಾಲ ಪಡೆದಿದ್ದಾರೆ. ಇದರಲ್ಲಿ 25 ಲಕ್ಷ ರೂಪಾಯಿ ಕೊಟ್ಟಿದ್ದಾರೆ. ಈ ಬಗ್ಗೆ ಒಪ್ಪಂದ ಸಹ ಮಾಡಿಕೊಳ್ಳಲಾಗಿತ್ತು. ಆದರೆ, ಈ ನಟರನ್ನು ಹಾಕಿಕೊಂಡು ಯಾವುದೇ ಸಿನಿಮಾ ಮಾಡುತ್ತಿಲ್ಲ ಅನ್ನೋದು ಗೊತ್ತಾಗಿದೆ. ಉಳಿದ ಹಣ ಕೊಡದೆ ವಂಚಿಸಿದ್ದಾರೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.

WhatsApp Group Join Now
Telegram Group Join Now
Share This Article