ಪ್ರಜಾಸ್ತ್ರ ಸುದ್ದಿ
ವಿಜಯಪುರ(Vijayapura): ಬಿಸಲಿನ ತಾಪಮಾನ ಹೆಚ್ಚಾಗುತ್ತಿದ್ದು, ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ಈ ಜಿಲ್ಲೆಗಳ ಕಚೇರಿ ಸಮಯವನ್ನು ಬದಲಾವಣೆ ಮಾಡಿ ಸರ್ಕಾರ ಆದೇಶಿಸಿದೆ. ಬೆಳಗಾವಿ, ಕಲಬುರಗಿ, ವಿಜಯಪುರ, ಬಾಗಲಕೋಟೆ ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ ಸಮಯವನ್ನು ಮುಂಜಾನೆ 8 ಗಂಟೆಯಿಂದ 1.30ರ ತನಕ ನಿಗದಿ ಮಾಡಿದೆ.
ರಾಜ್ಯ ಸರ್ಕಾರಿ ನೌಕರರ ಸಂಘ ಈ ಬಗ್ಗೆ ಸರ್ಕಾರಕ್ಕೆ ಮನವಿ ಸಲ್ಲಿಸಿತ್ತು. ಬಿಸಿಲಿನಿಂದ ನೌಕರರು ಎದುರಿಸುತ್ತಿರುವ ಆರೋಗ್ಯ ಸಮಸ್ಯೆಯ ಬಗ್ಗೆ, ಕೆಲಸದ ಒತ್ತಡದ ಬಗ್ಗೆ ಮನವಿಯಲ್ಲಿ ತಿಳಿಸಲಾಗಿತ್ತು. ಮಾನವೀಯ ದೃಷ್ಟಿಯಿಂದ ಕೆಲಸದ ಸಮಯ ಬದಲಾಯಿಸಲಾಗಿದೆ. ತುರ್ತು ಸಂದರ್ಭದಲ್ಲಿ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯ್ತಿ ಸಿಇಒ ಅವರು ಸೂಚಿಸಿದರೆ ಸಮಯದ ಮಿತಿಯಿಲ್ಲದೆ ಕೆಲಸ ಮಾಡಬೇಕು ಆದೇಶದಲ್ಲಿ ತಿಳಿಸಲಾಗಿದೆ.




