ಪ್ರಜಾಸ್ತ್ರ ಸುದ್ದಿ
ಕೋಲ್ಕತ್ತಾ(Kolkta): ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಕಣ ರಂಗೇರುತ್ತಿದೆ. ಬುಧವಾರ ಮುಖ್ಯಮಂತ್ರಿ, ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ನಾಮಪತ್ರ ಸಲ್ಲಿಸಿದರು. ಭವಾನಿಪುರ ವಿಧಾನಸಭಾ ಕ್ಷೇತ್ರದಿಂದ ಇವರು ಸ್ಪರ್ಧಿಸುತ್ತಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮೊದಲು ಬೃಹತ್ ರ್ಯಾಲಿ ನಡೆಸಿದರು.
ನಾನು ಇದೆ ಭವಾನಿಪುರದಲ್ಲಿ ಹುಟ್ಟಿ ಬೆಳೆದವಳು. ನನ್ನ ಜೀವನದ ಪ್ರತಿಯೊಂದು ಕ್ಷಣವೂ ಇಲ್ಲಿಂದಲೇ ಪ್ರಾರಂಭವಾಗಿದೆ. 294 ಕ್ಷೇತ್ರಗಳಲ್ಲೂ ನಮ್ಮ ಅಭ್ಯರ್ಥಿಗಳಿಗೆ ಬೆಂಬಲ ನೀಡಿ. ಕಳೆದ 213 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದೇವು. ಈ ಬಾರಿ ಅದು ಹೆಚ್ಚಾಗಲಿ ಎಂದು ಮತದಾರರಲ್ಲಿ ಮನವಿ ಮಾಡಿಕೊಂಡರು.




