ಪ್ರಜಾಸ್ತ್ರ ಸುದ್ದಿ
ಚೆನ್ನೈ: ಬುಧವಾರ ಸಂಭವಿಸಿದ ಹೆಲಿಕಾಪ್ಟರ್ ಪತನದಲ್ಲಿ ಮಡಿದ ಸಿಡಿಎಸ್ ಬಿಪಿನ್ ರಾವತ್ ಸೇರಿದಂತೆ 13 ಜನರು ಮೃತಪಟ್ಟಿದ್ದಾರೆ. ಈ ದುರಂತದಲ್ಲಿ ಮಡಿದವರಿಗೆ ತಮಿಳುನಾಡು ಸರ್ಕಾರದಿಂದ ಗೌರವ ಸಲ್ಲಿಸಲಾಗಿದೆ. ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅಂತಿಮ ನಮನ ಸಲ್ಲಿಸಿದರು.
ಮದ್ರಾಸ್ ರೆಜಿಮೆಂಟ್ ನಲ್ಲಿ ಅಂತಿಮವಾಗಿ ಸೇನಾ ಗೌರವ ಸಲ್ಲಿಸಲಾಗಿದೆ. ಇದಾದ ನಂತರ ಸೇನಾ ಅಧಿಕಾರಿಗಳ ಮೃತದೇಹಗಳನ್ನು ನವದೆಹಲಿಗೆ ವಿಶೇಷ ವಿಮಾನದ ಮೂಲಕ ಸ್ಥಳಾಂತರಿಸಲಾಗುತ್ತೆ. ನಂತರ ಅವರಿಗೆ ಕೇಂದ್ರ ಸರ್ಕಾರ ಹಾಗೂ ಸೇನಾ ಪಡೆಯಿಂದ ಸಕಲ ಸರ್ಕಾರಿ ಗೌರವ ಸಲ್ಲಿಸಲಾಗುತ್ತೆ.