Ad imageAd image

ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿ ಬಳಿ ಸಾಕ್ಷಿಯಿದೆ: ಸಿಎಂ ಸಿದ್ದರಾಮಯ್ಯ

Nagesh Talawar
ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿ ಬಳಿ ಸಾಕ್ಷಿಯಿದೆ: ಸಿಎಂ ಸಿದ್ದರಾಮಯ್ಯ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaluru): ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಬೆಂಗಳೂರಿನ ಮಹದೇವಪುರ ಹಾಗೂ ರಾಜಾಜಿನಗರದಲ್ಲಿ ಮತಗಳ್ಳತನವಾಗಿದೆ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಈ ವಿಚಾರವಾಗಿ ಆಗಸ್ಟ್ 5ರಂದು ಬೆಂಗಳೂರಲ್ಲಿ ಪ್ರತಿಭಟನೆ ನಡೆಸುವ ಮೂಲಕ ರಾಜ್ಯ ಮುಖ್ಯ ಚುನಾವಣಾಧಿಕಾರಿಯನ್ನು ಭೇಟಿಯಾಗಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಮುಖ್ಯಮಂತ್ರಿ, ಮತಗಳ್ಳತನ ಆಗಿರುವ ಬಗ್ಗೆ ಲೋಕಸಭೆಯ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಅವರ ಬಳಿ ಸಾಕ್ಷಿ ಇದೆ ಎಂದಿದ್ದಾರೆ. ಈ ಬಗ್ಗೆ ರಾಹುಲ್ ಗಾಂಧಿ ಮಾತನಾಡಿ, ನಾವು ಕರ್ನಾಟಕದಲ್ಲಿ ಒಂದು ಲೋಕಸಭಾ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡು ಅಧ್ಯಯನ ನಡೆಸಿದೆವು. ಆ ಕ್ಷೇತ್ರದ ಮತದಾರರ ಡಿಜಿಟಲ್ ಪಟ್ಟಿಯನ್ನು ತೆಗೆದುಕೊಂಡು ವಿಶ್ಲೇಷಣೆ ನಡೆಸಲಾಯಿತು. ಇದಕ್ಕೆ 6 ತಿಂಗಳು ತೆಗೆದುಕೊಂಡಿದೆ. ಮತದಾರರ ಪಟ್ಟಿಯಲ್ಲಿ ಅವರು ಹೇಗೆ ಅಕ್ರಮ ಎಸಗುತ್ತಾರೆ. ಹೊಸ ಮತದಾರರನ್ನು ಹೇಗೆ ಸೇರ್ಪಡೆ ಮಾಡುತ್ತಾರೆ. ಎಲ್ಲಿಂದ ಕರೆ ತರುತ್ತಾರೆ ಅನ್ನೋದು ಸೇರಿದಂತೆ ಅವರ ಮತ ಕಳ್ಳತನದ ಪೂರ್ತಿ ಕಾರ್ಯ ಶೈಲಿಯನ್ನು ತಿಳಿದುಕೊಂಡಿದ್ದೇವೆ ಎಂದು ಹೇಳಿದ್ದರು.

WhatsApp Group Join Now
Telegram Group Join Now
Share This Article