Ad imageAd image

ಸರ್ಕಾರ ಅಸ್ಥಿರಗೊಳಿಸಲು ರಾಜಭವನ ದುರ್ಬಳಕೆ: ಸಿಎಂ ಸಿದ್ದರಾಮಯ್ಯ

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲ ದಾಖಲೆಗಳನ್ನು ರಾಜ್ಯಪಾಲರಿಗೆ ಈಗಾಗ್ಲೇ ನೀಡಲಾಗಿದೆ. ಆದರೆ, ದುರುದ್ದೇಶದಿಂದ ಅವರು ನೋಟಿಸ್ ನೀಡಿದ್ದಾರೆ.

Nagesh Talawar
ಸರ್ಕಾರ ಅಸ್ಥಿರಗೊಳಿಸಲು ರಾಜಭವನ ದುರ್ಬಳಕೆ: ಸಿಎಂ ಸಿದ್ದರಾಮಯ್ಯ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ಮುಡಾ(MUDA) ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲ ದಾಖಲೆಗಳನ್ನು ರಾಜ್ಯಪಾಲರಿಗೆ ಈಗಾಗ್ಲೇ ನೀಡಲಾಗಿದೆ. ಆದರೆ, ದುರುದ್ದೇಶದಿಂದ ಅವರು ನೋಟಿಸ್ ನೀಡಿದ್ದಾರೆ. ಬೇರೆ ರಾಜ್ಯಗಳಲ್ಲಿ ಸರ್ಕಾರ ಅಸ್ಥಿರಗೊಳಿಸಿದಂತೆ ಕರ್ನಾಟಕದಲ್ಲೂ ಮಾಡುವ ಪ್ರಯತ್ನ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ಹೊರ ಹಾಕಿದ್ದಾರೆ. ಸಿಎಂ(Siddaramaih) ನಿವಾಸದಲ್ಲಿ ಸಚಿವರಿಗೆ ಆಯೋಜಿಸಿದ್ದ ಉಪಹಾರ ಸಭೆಯಲ್ಲಿ ರಾಜ್ಯಪಾಲರ ನೋಟಿಸ್ ವಿಚಾರ ಚರ್ಚಿಸಲಾಗಿದೆ.

ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು(Governor) ಅನುಮತಿ ನೀಡಿದರೆ ಕಾನೂನು ಹೋರಾಟ ಮಾಡುವ ಕುರಿತು ಸಭೆಯಲ್ಲಿ ಚರ್ಚಿಸಲಾಗಿದೆ. ತಮಿಳುನಾಡು, ಮಹಾರಾಷ್ಟ್ರ, ಕೇರಳ, ಪಶ್ಚಿಮ ಬಂಗಾಳದಂತೆ ಕರ್ನಾಟಕದಲ್ಲೂ ಕೇಂದ್ರ ಸರ್ಕಾರ ರಾಜ್ಯಪಾಲರನ್ನು ದುರ್ಬಳಕೆ ಮಾಡಿಕೊಂಡಿದೆ. ಇದನ್ನು ಕಾನೂನು ಹಾಗೂ ರಾಜಕೀಯ ಹೋರಾಟ ಮಾಡುವುದರೊಂದಿಗೆ ವಿಫಲಗೊಳಿಸಲಾಗುವುದು ಎಂದಿದ್ದಾರೆ.

WhatsApp Group Join Now
Telegram Group Join Now
Share This Article