ಪ್ರಜಾಸ್ತ್ರ ಸುದ್ದಿ
ಚೆನ್ನೈ(Chennai): ನಟ ಸೂರ್ಯ ಹಾಗೂ ನಟಿ ತ್ರಿಷಾ ಅಭಿನಯದ ಕರುಪ್ಪು ಚಿತ್ರದ ವಿಶೇಷ ಪ್ರದರ್ಶನಕ್ಕೆ ಮುಖ್ಯಮಂತ್ರಿ ವಿಜಯ್ ಜೋಸೆಫ್ ಅನುಮತಿ ನೀಡಿದ್ದಾರೆ. ಮೇ 14ರಂದು ಸಿನಿಮಾ ಬಿಡುಗಡೆಯಾಗುತ್ತಿದೆ. ಮುಂಜಾನೆ 9 ಗಂಟೆಯ ವಿಶೇಷ ಪ್ರದರ್ಶನಕ್ಕೆ ಅನುಮತಿ ನೀಡಿದ್ದಾರೆ. ಈ ಮೂಲಕ ಚಿತ್ರರಂಗದ ಬೆಂಬಲಕ್ಕೆ ನಿಂತಿದ್ದಾರೆ.
ಸಿನಿಮಾ ನಿರ್ಮಾಣ ಸಂಸ್ಥೆ ಡ್ರೀಮ್ ವಾರಿಯರ್ ಪಿಕ್ಚರ್ಸ್ ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಮಾಹಿತಿಯನ್ನು ಹಂಚಿಕೊಂಡಿದೆ. ಮುಖ್ಯಮಂತ್ರಿ ವಿಜಯಗೆ ಧನ್ಯವಾದಗಳನ್ನು ತಿಳಿಸಿದೆ. ಆರ್.ಜೆ ಬಾಲಾಜಿ ಈ ಸಿನಿಮಾವನ್ನು ನಿರ್ದೇಶನ ಮಾಡಿದ್ದಾರೆ. ಪ್ರಕಾಶ್ ಬಾಬು, ಎಸ್.ಆರ್ ಪ್ರಭು ಅವರು ಡ್ರೀಮ್ ವಾರಿಯರ್ ಪಿಕ್ಚರ್ಸ್ ಅಡಿಯಲ್ಲಿ ನಿರ್ಮಾಣ ಮಾಡಿದ್ದಾರೆ. ಕನ್ನಡದಲ್ಲಿ ಕೆವಿಎನ್ ನಿರ್ಮಾಣ ಸಂಸ್ಥೆ ವಿತರಣೆ ಮಾಡಲಿದೆ.




