Ad imageAd image

ಸಿದ್ದರಾಮಯ್ಯ ವಿರುದ್ಧ ಇಡಿಗೆ ದೂರು

ಮುಡಾ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಹೋರಾಟ ನಡೆಸಿರುವ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ

Nagesh Talawar
ಸಿದ್ದರಾಮಯ್ಯ ವಿರುದ್ಧ ಇಡಿಗೆ ದೂರು
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ಮುಡಾ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಹೋರಾಟ ನಡೆಸಿರುವ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ(Snehamayi Krishna)ಈಗ ಇಡಿಗೂ ದೂರು ಸಲ್ಲಿಸಿದ್ದಾರೆ. ಬೆಂಗಳೂರಿನಲ್ಲಿರುವ ಇಡಿ ಕಚೇರಿಯ ಜಂಟಿ ನಿರ್ದೇಶಕರಿಗೆ ಇ-ಮೇಲ್ ಹಾಗೂ 16 ಪುಟಗಳ ದೂರಿನ ಪ್ರತಿಯನ್ನು ಅಂಚೆ ಮೂಲಕ ಸಲ್ಲಿಸಿದ್ದಾರೆ. ಈ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಒಂದಲ್ಲ ಒಂದು ರೀತಿಯಿಂದ ಕಾನೂನು ಅಸ್ತ್ರಗಳನ್ನು ಪ್ರಯೋಗ ಮಾಡುತ್ತಿದ್ದು, ಇದರ ಹಿಂದೆ ಯಾರಿದ್ದಾರೆ ಎನ್ನುವ ಪ್ರಶ್ನೆ ಮೂಡಿದೆ.

ಅಧಿಕಾರ ದುರುಪಯೋಗ ಪಡೆಸಿಕೊಂಡು ಪತ್ನಿ ಹೆಸರಿನಲ್ಲಿ ಅಕ್ರಮವಾಗಿ 14 ನಿವೇಶನಗಳನ್ನು ಪಡೆದಿದ್ದಾರೆ. ಇದರ ಜೊತೆಗೆ ಸಾಕಷ್ಟು ಹಗರಣ ಸಹ ನಡೆದಿದೆ. ಅಕ್ರಮ ಹಣ ವರ್ಗಾವಣೆ ಕಾಯ್ದೆ ಅಡಿಯಲ್ಲಿ ಸಿದ್ದರಾಮಯ್ಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಬೇಕೆಂದು ದೂರು ಸಲ್ಲಿಸಿದ್ದಾರೆ.

WhatsApp Group Join Now
Telegram Group Join Now
Share This Article