Ad imageAd image

ಸಿದ್ಧರಾಮಯ್ಯ ರಾಜೀನಾಮೆಗೆ ಶಾಸಕರ, ಸಚಿವರ ಸಿದ್ಧತೆ: ಸಿ.ಟಿ ರವಿ

ಕಾಂಗ್ರೆಸ್ಸಿನಲ್ಲಿ ಮುಖ್ಯಮಂತ್ರಿ ಆಗಬೇಕು ಎನ್ನುವವರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿಯೇ ಸಿದ್ಧರಾಮಯ್ಯನವರ ರಾಜೀನಾಮೆಗೆ ಶಾಸಕರು, ಸಚಿವರು ಸಿದ್ಧತೆ ನಡೆಸಿದ್ದಾರೆ.

Nagesh Talawar
ಸಿದ್ಧರಾಮಯ್ಯ ರಾಜೀನಾಮೆಗೆ ಶಾಸಕರ, ಸಚಿವರ ಸಿದ್ಧತೆ: ಸಿ.ಟಿ ರವಿ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಹುಬ್ಬಳ್ಳಿ(Hubballi): ಕಾಂಗ್ರೆಸ್ಸಿನಲ್ಲಿ ಮುಖ್ಯಮಂತ್ರಿ ಆಗಬೇಕು ಎನ್ನುವವರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿಯೇ ಸಿದ್ಧರಾಮಯ್ಯನವರ ರಾಜೀನಾಮೆಗೆ ಶಾಸಕರು, ಸಚಿವರು ಸಿದ್ಧತೆ ನಡೆಸಿದ್ದಾರೆ. ದೀಪಾವಳಿಗೆ ಸರ್ಕಾರ ಢಮಾರ್ ಆಗಲಿದೆ ಎಂದು ಬಿಜೆಪಿ ಎಂಎಲ್ಸಿ ಸಿ.ಟಿ(CT Ravi) ರವಿ ಹೇಳಿದ್ದಾರೆ. ನಗರದಲ್ಲಿ ಸೋಮವಾರ ಮಾತನಾಡಿದ ಅವರು, ಸಿದ್ದರಾಮಯ್ಯನವರ ರಾಜೀನಾಮೆಗೆ ಸಮಯ ಸಹ ನಿಗದಿ ಮಾಡಿದ್ದಾರೆ.

ಕಾಂಗ್ರೆಸ್ ಒಳಜಗಳ ಶುರುವಾಗಿದೆ. ಆದ್ದರಿಂದಲೇ ತಾವು ಮುಖ್ಯಮಂತ್ರಿ ಆಕಾಂಕ್ಷಿ ಎಂದು ಹೇಳಿಕೆ ನೀಡುತ್ತಿದ್ದಾರೆ. ಮುಡಾ, ವಾಲ್ಮೀಕಿ, ಅರ್ಕಾವತಿ ಡಿ ನೋಟಿಫಿಕೇಷನ್ ಹೀಗೆ ಸಾಲು ಸಾಲು ಹಗರಣಗಳು ಸಿದ್ದರಾಮಯ್ಯನವರ ಅವಧಿಯಲ್ಲಿ ನಡೆದಿವೆ. ಮುಡಾ ಹಗರಣದ ವಿಚಾರಣೆ ಕೋರ್ಟ್ ನಲ್ಲಿದೆ. ಅದಕ್ಕೂ ಮೊದಲೇ ಸಿದ್ದರಾಮಯ್ಯನವರು ನೈತಿಕತೆ ಹೊತ್ತು ರಾಜೀನಾಮೆ ನೀಡಲಿ ಎಂದರು.

WhatsApp Group Join Now
Telegram Group Join Now
Share This Article