Ad imageAd image

ಶೌಚಾಲಯಕ್ಕೆ ಸರ್ಜಿಕಲ್ ಚೇರ್ ಕೇಳಿದ ದರ್ಶನ್

ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಸ್ಥಳಾಂತರಗೊಂಡಿರುವ ನಟ ದರ್ಶನ್ ಶೌಚಾಲಯಕ್ಕೆ ಸರ್ಜಿಕಲ್ ಚೇರ್ ಕೇಳಿದ್ದಾರೆ ಎಂದು ಉತ್ತರ ವಲಯ

Nagesh Talawar
ಶೌಚಾಲಯಕ್ಕೆ ಸರ್ಜಿಕಲ್ ಚೇರ್ ಕೇಳಿದ ದರ್ಶನ್
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಬಳ್ಳಾರಿ(Ballari): ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಸ್ಥಳಾಂತರಗೊಂಡಿರುವ ನಟ ದರ್ಶನ್(Darshan) ಶೌಚಾಲಯಕ್ಕೆ ಸರ್ಜಿಕಲ್ ಚೇರ್ ಕೇಳಿದ್ದಾರೆ ಎಂದು ಉತ್ತರ ವಲಯ ಡಿಐಜಿ ಟಿ.ಪಿ ಶೇಷ ಅವರು ಹೇಳಿದ್ದಾರೆ. ಒಂದು ವೇಳೆ ಅವರು ಟಿವಿ ಕೇಳಿದರೆ ಕೊಡಲಾಗುವುದು. ಇತರೆ ಕೈದಿಗಳಿಗೂ ಈ ವ್ಯವಸ್ಥೆ ಇದೆ ಎಂದರು.

ಬೆನ್ನಲುಬು ಸಮಸ್ಯೆ ಇರುವ ಕಾರಣಕ್ಕೆ ಶೌಚಾಲಯಕ್ಕೆ ಕಷ್ಟವಾಗುತ್ತದೆ. ಇಲ್ಲಿ ಇಂಡಿಯನ್ ಟಾಯ್ಲೆಟ್ ಇದೆ. ಹೀಗಾಗಿ ವೆಸ್ಟ್ರನ್ ಕಮೋಡಾ ಅಥವ ಸರ್ಜಿಕಲ್ ಚೇರ್ ಕೊಡಿ ಎಂದು ಕೇಳಿದ್ದಾರೆ. ಇಲಾಖೆ ಸೂಚನೆ ಮೇರೆಗೆ ಶನಿವಾರ ಜೈಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು. ಕುಟುಂಬಸ್ಥರು, ವಕೀಲರು ಬಿಟ್ಟು ಬೇರೆ ಯಾರಿಗೂ ಭೇಟಿಗೆ ಅವಕಾಶ ನೀಡುವುದಿಲ್ಲವೆಂದು ಹೇಳಿದರು.

WhatsApp Group Join Now
Telegram Group Join Now
Share This Article