Ad imageAd image

ದರ್ಶನ್ ಬೆಳಗಾವಿಯ ಹಿಂಡಲಗಾ ಜೈಲಿಗೆ ಶಿಫ್ಟ್?

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಎಂಬಾತನ ಕೊಲೆ ಕೇಸಿನಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್,

Nagesh Talawar
ದರ್ಶನ್ ಬೆಳಗಾವಿಯ ಹಿಂಡಲಗಾ ಜೈಲಿಗೆ ಶಿಫ್ಟ್?
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಎಂಬಾತನ ಕೊಲೆ ಕೇಸಿನಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್(Darshan), ಮ್ಯಾನೇಜರ್ ನಾಗರಾಜ್ ಹಾಗೂ ರೌಡಿ ಶೀಟರ್ ವಿಲ್ಸನ್ ಗಾರ್ಡನ್ ನಾಗ, ಕುಳ್ಳ ಸೀನ ಜೊತೆಗೆ ಕುರ್ಚಿಯಲ್ಲಿ ಕುಳಿತುಕೊಂಡು ಕಾಫಿ ಕುಡಿಯುತ್ತಾ, ಸಿಗರೇಟ್ ಸೇದುತ್ತಿರುವ ಫೋಟೋ ಸಾಕಷ್ಟು ಸದ್ದು ಮಾಡಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿದೆ. ಕರ್ತವ್ಯ ಲೋಪದ ಅಡಿಯಲ್ಲಿ 7 ಅಧಿಕಾರಿಗಳನ್ನು ಈಗಾಗ್ಲೇ ಅಮಾನತು ಮಾಡಲಾಗಿದೆ. ದರ್ಶನ್ ಸೇರಿ ಇತರರನ್ನು ಬೇರೆ ಬೇರೆ ಜೈಲುಗಳಿಗೆ ಸ್ಥಳಾಂತರಿಸಲು ತಾಕೀತು ಮಾಡಿದ್ದೇನೆ ಎಂದಿದ್ದಾರೆ.

ಕಾರಾಗೃಹಕ್ಕೆ(Jail) ಕೂಡಲೇ ಭೇಟಿ ನೀಡಿ, ಪ್ರಕರಣದ ಸಂಪೂರ್ಣ ವರದಿ ನೀಡುವಂತೆ ರಾಜ್ಯ ಪೊಲೀಸ್(DG IGP) ಮಹಾನಿರ್ದೇಶಕರಿಗೆ ಸೂಚಿಸಿದ್ದೇನೆ ಎಂದಿದ್ದಾರೆ. ಇನ್ನು ವಿಡಿಯೋ ಕಾಲ್ ನಲ್ಲಿ ಕೆಲ ರೌಡಿಗಳೊಂದಿಗೆ ಮಾತನಾಡಿರುವುದು ಬಹಿರಂಗವಾಗಿದೆ. ಇದೆಲ್ಲದರ ಸತ್ಯಾಸತ್ಯತೆ ಆಂತರಿಕ ತನಿಖೆಯಿಂದ ತಿಳಿದು ಬರಬೇಕಿದೆ. ನಟ ದರ್ಶನನ್ನು ಬೆಳಗಾವಿಯ ಹಿಂಡಲಗಾ ಜೈಲಿಗೆ ಶಿಫ್ಟ್ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕೋರ್ಟ್ ಆಗಸ್ಟ್ 28ರ ತನಕ ನ್ಯಾಯಾಂಗ ಬಂಧನಕ್ಕೆ ನೀಡಿದೆ.

WhatsApp Group Join Now
Telegram Group Join Now
Share This Article