Ad imageAd image

ದಾವಣಗೆರೆ ಗಲಾಟೆ: 30 ಆರೋಪಿಗಳ ಬಂಧನ

ಮಂಡ್ಯ ಜಿಲ್ಲೆಯ ನಾಗಮಂಗಲ ಬಳಿಕ ದಾವಣಗೆರೆಯಲ್ಲೂ ಗಣೇಶ ವಿಸರ್ಜನೆ ವೇಳೆ ಗಲಾಟೆ ನಡೆದಿದೆ. ಗುರುವಾರ ಸಂಜೆ ಗಣೇಶಮೂರ್ತಿ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದೆ.

Nagesh Talawar
ದಾವಣಗೆರೆ ಗಲಾಟೆ: 30 ಆರೋಪಿಗಳ ಬಂಧನ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ದಾವಣಗೆರೆ(Davanagere): ಮಂಡ್ಯ ಜಿಲ್ಲೆಯ ನಾಗಮಂಗಲ(Nagamangala) ಬಳಿಕ ದಾವಣಗೆರೆಯಲ್ಲೂ ಗಣೇಶ ವಿಸರ್ಜನೆ ವೇಳೆ ಗಲಾಟೆ ನಡೆದಿದೆ. ಗುರುವಾರ ಸಂಜೆ ಗಣೇಶಮೂರ್ತಿ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದೆ. ಈ ಸಂಬಂಧ ಇಂದು 30 ಆರೋಪಿಗಳನ್ನು ಬಂಧಿಸಲಾಗಿದೆ. ಮನೆಗಳಿಗೆ ನುಗ್ಗಿದ ಪೊಲೀಸರು 30 ಜನರನ್ನು ಬಂಧಿಸಿದ್ದಾರೆ. ನಗರ ನಾಲ್ಕು ಪೊಲೀಸ್ ಠಾಣೆಗಳಲ್ಲಿ 4 ಎಫ್ಐಆರ್(FIR) ಗಳು ದಾಖಲಾಗಿವೆ. ಪೊಲೀಸರು ಲಾಠಿ ಏಟು ಕೊಟ್ಟು ಒಬ್ಬೊಬ್ಬರನ್ನು ಎತ್ತಾಕೊಂಡು ಹೋಗಿದ್ದಾರೆ.

ಗುರುವಾರ ಸಂಜೆ ಸುಮಾರು 7.30ರ ಸುಮಾರಿಗೆ ಗಣೇಶಮೂರ್ತಿ ಮೆರವಣಿಗೆ ವೆಂಕಟೇಶ್ವರ್ ಸರ್ಕಲ್ ಹತ್ತಿರ ಬಂದಾಗ ಕೆಲವರು ಘೋಷಣೆ ಕೂಗಿದ್ದಾರೆ. ಇದು ಗಲಾಟೆಗೆ ಕಾರಣವಾಗಿ ಏಕಾಏಕಿ ಕಲ್ಲು ತೂರಾಟ ನಡೆದಿದೆ. ಈ ವೇಳೆ ಪೊಲೀಸ್ ಕಾನ್ ಸ್ಟೆಬಲ್ ಗಳಾದ ರಘು ಹಾಗೂ ಅನುಪೂರ್ಣ ಎಂಬುವರು ಗಾಯಗೊಂಡಿದ್ದಾರೆ. ಇವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಇದಲ್ಲದೆ 50 ರಿಂದ 60 ಜನ ಕಿಡಿಗೇಡಿಗಳು ಆನೆಕೊಂಡ ಬಡಲಾವಣೆಯಲ್ಲಿ ಮಾರಕಾಸ್ತ್ರಗಳನ್ನು ಹಿಡಿದು ಓಡಾಡಿದ್ದಾರೆ. ಮನೆ ಮುಂದೆ ನಿಲ್ಲಿಸಿದ ಬೈಕ್ ಕಾರುಗಳನ್ನು ಹಾನಿಗೊಳಿಸಿದ್ದಾರೆ.

WhatsApp Group Join Now
Telegram Group Join Now
Share This Article