Ad imageAd image

ಐತಿಹಾಸಿಕ ಸ್ಮಾರಕಗಳ ಸ್ವಚ್ಛತೆಗೆ ಜಿಲ್ಲಾಧಿಕಾರಿ ಸೂಚನೆ

ನಗರದಲ್ಲಿರುವ ಹಲವು ಐತಿಹಾಸಿಕ ಸ್ಮಾರಕಗಳಿಗೆ ಶನಿವಾರ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಭೇಟಿ ನೀಡಿದರು.

Nagesh Talawar
ಐತಿಹಾಸಿಕ ಸ್ಮಾರಕಗಳ ಸ್ವಚ್ಛತೆಗೆ ಜಿಲ್ಲಾಧಿಕಾರಿ ಸೂಚನೆ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ವಿಜಯಪುರ(Vijayapura): ನಗರದಲ್ಲಿರುವ ಹಲವು ಐತಿಹಾಸಿಕ ಸ್ಮಾರಕಗಳಿಗೆ(Monument) ಶನಿವಾರ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಭೇಟಿ ನೀಡಿದರು. ಅಲ್ಲಿ ತೆಗೆದುಕೊಳ್ಳಬೇಕಾದ ಸ್ವಚ್ಛತಾ(Cleanliness) ಕ್ರಮದಿಂದ ಹಿಡಿದು ಸಂರಕ್ಷಣೆಗೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ, ಸಿಬ್ಬಂದಿಗೆ ಸೂಚಿಸಿದರು.

ಸುರಂಗ ಬಾವಡಿ, ಖಾನ್ ಸರೋವರ, 60 ಖಬರ್ ಬಾವಡಿ, ಇಬ್ರಾಹಿಂ ಸರೋವರ, ರಾಮಲಿಂಗ ಕೆರೆ ಹಾಗೂ ಹಾಥಿ ಬಾವಡಿ ಸ್ಮಾರಕ ಸ್ಥಳಗಳಿಗೆ ಭೇಟಿ ಕೊಟ್ಟು ವೀಕ್ಷಿಸಿದರು. ಈ ಎಲ್ಲ ಸ್ಮಾರಕಗಳಲ್ಲಿ ತೆಗೆದುಕೊಳ್ಳಬೇಕಾದ ಅಗತ್ಯ ಕ್ರಮಗಳ ಕುರಿತು ಸ್ಥಳದಲ್ಲಿದ್ದ ವಿವಿಧ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

WhatsApp Group Join Now
Telegram Group Join Now
Share This Article