Ad imageAd image

ಪ್ರವಾಹ ಮುಂಜಾಗ್ರತ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಪ್ರವಾಹ ಪೀಡಿತಕ್ಕೊಳಗಾಗಬಹುದಾದ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಕಾಳಗಿ ಹಾಗೂ ನಿಡಗುಂದಿ ತಾಲೂಕಿನ ಮಸೂತಿ ಹಾಗೂ ಯಲಗೂರಕ್ಕೆ ಶನಿವಾರ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು

Nagesh Talawar
ಪ್ರವಾಹ ಮುಂಜಾಗ್ರತ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ವಿಜಯಪುರ(Vijayapura): ಪ್ರವಾಹ ಪೀಡಿತಕ್ಕೊಳಗಾಗಬಹುದಾದ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಕಾಳಗಿ ಹಾಗೂ ನಿಡಗುಂದಿ ತಾಲೂಕಿನ ಮಸೂತಿ ಹಾಗೂ ಯಲಗೂರಕ್ಕೆ ಶನಿವಾರ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಭೇಟಿ ನೀಡಿ ಪ್ರವಾಹ(Flood) ಪರಿಸ್ಥಿತಿ ಕುರಿತು ಪರಿಶೀಲನೆ ನಡೆಸಿದರು. ಈ ವೇಳೆ ಮಾಧ್ಯಮವರೊಂದಿಗೆ ಮಾತನಾಡಿದ ಅವರು, ಹೊಳೆಮಸೂತಿ ಕೆನಾಲ್ ಹತ್ತಿರ ಕೆಲವು ತಾಂತ್ರಿಕ ತೊಂದರೆಯಿಂದ ನೀರು ರೈತರ ಹೊಲಗಳಿಗೆ ಹರಿಯುತ್ತಿರುವುದರಿಂದ ಸಮಸ್ಯೆಯಾಗಿರುವುದಾಗಿ ರೈತರು ದೂರು ಸಲ್ಲಿಸಿದ್ದು, ಈ ಕುರಿತು ಕೂಡಲೇ ದುರಸ್ತಿಗೊಳಿಸಿ ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳುವಂತೆ ಈಗಾಗಲೇ ಕೆಬಿಜೆಎನ್‌ಎಲ್ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಎನ್‌ಡಿಆರ್‌ಎಫ್(NDRF) ಮಾರ್ಗಸೂಚಿಯನ್ವಯ ಮನೆಹಾನಿ, ಜನ-ಜಾನುವಾರು ಹಾನಿಗೆ(loss) ಪರಿಹಾರ ನೀಡಲು ಅವಕಾಶವಿದ್ದು, ಸೂಕ್ತ ಪರಿಶೀಲನೆ ನಡೆಸಿ ಸಮೀಕ್ಷೆ ಕಾರ್ಯ ನಡೆಸಿ ಪರಿಹಾರ ಒದಗಿಸಲು ಕ್ರಮ ವಹಿಸಲಾಗುವುದು. ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ 3 ತಾಲೂಕಿನ 120 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ನೀರು ಹರಿಯುತ್ತಿದೆ. ಜಿಲ್ಲೆಯಲ್ಲಿ ಕೃಷ್ಣಾ(Krishna river) ನದಿಗೆ 5 ಲಕ್ಷ ಕ್ಯೂಸೆಕ್‌ಗಿಂತ ಹೆಚ್ಚಿನ ನೀರು ಹರಿಯುವುದರಿಂದ ಸಮಸ್ಯೆ ಉಂಟಾಗುವ ಸಾಧ್ಯತೆ ಇದ್ದು, ಕಳೆದ 2019ರಲ್ಲಿ ಹೆಚ್ಚಿನ ನೀರು ಹಳ್ಳಿಗಳಲ್ಲಿ ಹರಿದು ಸಮಸ್ಯೆ ಉಂಟಾಗಿತ್ತು. ಈ ಸಲ ಅಂತಹ ಯಾವುದೇ ಸಮಸ್ಯೆಯಾಗದಂತೆ ಅಧಿಕಾರಿಗಳೊಂದಿಗೆ ವಿವಿಧೆಡೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ. ಆಲಮಟ್ಟಿಗೆ 2.90 ಲಕ್ಷ ಸಾವಿರ ಕ್ಯೂಸೆಕ್, ಒಳ ಹರಿವು 3  ಲಕ್ಷ  ಕ್ಯೂಸೆಕ್ ಇದೆ.  ಹಿಂದಿನ ದಿನಕ್ಕೆ ಹೋಲಿಸಿದರೆ ನೀರಿನ ಮಟ್ಟ ಸ್ವಲ್ಪ ಕಡಿಮೆಯಾಗಿದೆ. ನೀರಿನ ಮಟ್ಟ ಹೆಚ್ಚಾಗಲಿ ಕಡಿಮೆಯಾಗಲಿ ತೀವ್ರ ನಿಗಾ ಸಹ ಇಡಲಾಗಿದೆ. ಸಾರ್ವಜನಿಕರು ಸಹ ಮುಂಜಾಗ್ರತಾ ಕ್ರಮ ಪಾಲಿಸಿಕೊಂಡು ಎಚ್ಚರಿಕೆಯಿಂದಿರಲು ಅವರು ಮನವಿ ಮಾಡಿಕೊಂಡರು.

ಈ ವೇಳೆ ಮುದ್ದೇಬಿಹಾಳ ತಾಲೂಕಿನ ಉಸ್ತುವಾರಿ ಶಂಕರಗೌಡ ಸೋಮನಾಳ, ಜಿಲ್ಲಾ ಪಂಚಾಯತಿಯ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ತಹಶೀಲ್ದಾರರು ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp Group Join Now
Telegram Group Join Now
Share This Article