Ad imageAd image

ಜಿಲ್ಲೆಯಲ್ಲಿನ ಸಂಪನ್ಮೂಲ ಸದುಪಯೋಗ ಪಡಿಸಿಕೊಳ್ಳಬೇಕು: ಜಿಲ್ಲಾಧಿಕಾರಿ ಟಿ.ಭೂಬಾಲನ್

Nagesh Talawar
ಜಿಲ್ಲೆಯಲ್ಲಿನ ಸಂಪನ್ಮೂಲ ಸದುಪಯೋಗ ಪಡಿಸಿಕೊಳ್ಳಬೇಕು: ಜಿಲ್ಲಾಧಿಕಾರಿ ಟಿ.ಭೂಬಾಲನ್
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ವಿಜಯಪುರ(Vijayapura): ವಿಜಯಪುರ ಜಿಲ್ಲೆಯು ಕೃಷಿ ಪ್ರಧಾನವಾದ ಜಿಲ್ಲೆಯಾಗಿದೆ. ಶೇ 80ರಷ್ಟು ಕೃಷಿ ಚಟುವಟಿಕೆಯಿಂದ ಆರ್ಥಿಕ ವ್ಯವಹಾರಗಳು ನಡೆಯುತ್ತಿವೆ ಜಿಲ್ಲೆಯಲ್ಲಿ ಸಣ್ಣ ಕೈಗಾರಿಕೆಗಳು ಹೆಚ್ಚು ಹೆಚ್ಚು ಸ್ಥಾಪನೆಯಾದಲ್ಲಿ ಉದ್ಯೋಗ ಸೃಷ್ಟಿ, ಸಾರ್ವಜನಿಕ ವಹಿವಾಟು, ರಫ್ತು, ಆದಾಯ ಹೆಚ್ಚಿಗೆ ನಿರೀಕ್ಷಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಹೇಳಿದರು.

ಬುಧವಾರ ನಗರದ ಸ್ಪೂರ್ತಿ ರೆಸಾರ್ಟನಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ, ವಿಶ್ವೇಶ್ವರ ವ್ಯಾಪಾರ ಉತ್ತೇಜನಾ ಕೇಂದ್ರ, ಹಾಗೂ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಎಂ.ಎಸ್.ಎಂ.ಇಗಳ ಕಾರ್ಯಕ್ಷಮತೆಯನ್ನು ಹೆಚ್ಚಿಸುವುದು ಮತ್ತು ವೇಗಗೊಳಿಸುವು ಯೋಜನೆಯಡಿಯಲ್ಲಿ ಲೀನ್ ಯೋಜನೆ ಮತ್ತು ಝಡ್.ಇ.ಡಿ ಹಾಗೂ ರಫ್ತು ಕುರಿರು ಒಂದು ದಿನದ ಕಾರ್ಯಾಗಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಸಣ್ಣ ಕೈಗಾರಿಕೆಗಳನ್ನು ಸ್ಥಾಪಿಸಲು ನಮ್ಮ ಜಿಲ್ಲೆಯಲ್ಲಿರುವ ಸಂಪನ್ಮೂಲಗಳನ್ನು ಸದುಪಯೋಗ ಪಡಿಸಿಕೊಂಡು  ಸರ್ಕಾರ, ಜಿಲ್ಲಾಡಳಿತ ಹಾಗೂ ವಿವಿಧ ಸಂಸ್ಥೆಗಳು ಸಹಕಾರ ನೀಡಿದಲ್ಲಿ  ಜಿಲ್ಲೆಯಲ್ಲಿರುವ ಸಣ್ಣ ಕೈಗಾರಿಕೆಗಳು ಯಾವುದೇ ನಷ್ಟ ಇಲ್ಲದೆ ಸರಳ ರೀತಿಯಲ್ಲಿ  ಉದ್ಯೋಗವನ್ನು ನಡೆಸಿಕೊಂಡು ಹೋಗಬಹುದು.

ನಮ್ಮ ಜಿಲ್ಲೆಯಿಂದ ಲಿಂಬೆ, ದ್ರಾಕ್ಷಿ, ದಾಳಿಂಬೆ ಬೆಳೆಗಳು ವಿಫುಲವಾಗಿ ಬೆಳೆದು ದೇಶ ಹಾಗೂ ವಿದೇಶಗಳಿಗೆ ರಫ್ತು ಆಗುತ್ತಿವೆ.  ಆದರೆ ಸಣ್ಣ ಕೈಗಾರಿಕೆಗಳಿಂದ ರಫ್ತು ಕಡಿಮೆ ಇದೆ. ಇದನ್ನು ಸರಿದೂಗಿಸಲು ನಮ್ಮ ಜಿಲ್ಲೆಯಲ್ಲಿ  ಸಣ್ಣ ಉದ್ದಿಮೆಗಳು ಬರಬೇಕು. ಉತ್ಪಾದನೆಗಳನ್ನು ಹೆಚ್ಚಿಸಿ ರಫ್ತು ಕೂಡ ಹೆಚ್ಚಿಸಿ ಜಿಲ್ಲೆಯನ್ನು ಸಮೃದ್ಧಿಗೊಳಿಸಬೇಕು ಎಂದು ಅವರು ಹೇಳಿದರು. ಕಾರ್ಯಾಗಾರದಲ್ಲಿ ಹಲವಾರು ಉದ್ದಿಮೆದಾರರ ಮುಖಂಡರು ಆಗಮಿಸಿದ್ದಾರೆ ಉದ್ದಿಮೆಗಳ ಅದಾಯ, ರಫ್ತುಗಳ ಕುರಿತು ತಮಗೆ ಹೆಚ್ಚಿನ ಮಾಹಿತಿ ವಿವಿರಿಸಲಿದ್ದಾರೆ ಅದರೊಂದಿಗೆ ಎಮ್.ಎಸ್.ಎಮ್.ಇ ಸಂಸ್ಥೆಯು ಕೂಡ ಹೆಚ್ಚಿನ ವಿಚಾರ ಹಾಗೂ ಮಾಹಿತಿ ನೀಡಲಿದೆ. ಈ ಸಂಸ್ಥೆಯಲ್ಲಿ ವಿವಿಧ ರೀತಿಯ ಉದ್ದಿಮೆಗಳನ್ನು ಸ್ಥಾಪಿಸಲು ಹಲವಾರು ಯೋಜನೆಗಳಿವೆ ಅವುಗಳು ಕೆಲವರಿಗೆ ಮಾತ್ರ ತಿಳಿದಿರುತ್ತವೆ ಇನ್ನುಳಿದವರಿಗೂ ತಿಳಿಸಿ ಉದ್ದಿಮೆಗಳನ್ನು ಸ್ಥಾಪಿಸಲು ಈ ಕಾರ್ಯಾಗಾರ ಉಪಯುಕ್ತವಾಗಿದೆ.

ನಮ್ಮ ಜಿಲ್ಲೆಯಲ್ಲಿಯೂ ಕೂಡ ಕೈಗಾರಿಕೆಗಳನ್ನು ಸ್ಥಾಪಿಸಲು ಹಾಗೂ ಕೈಗಾರಿಕೆ ಸ್ಥಾಪಿಸಲು ಮೂಲಭೂತ ಸೌಕರ್ಯಗಳನ್ನು ಒದಗಿಸಲು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಒಂದು ಸಮಿತಿ ಕೂಡ ಇದೆ ಅದರಲ್ಲಿ ಸಾಕಷ್ಟು ಉದ್ದಿಮೆದಾರರು ಇದ್ದು ಅವರು ಕೂಡ ಕೈಗಾರಿಕೆಗಳನ್ನು ಸ್ಥಾಪಿಸಲು ಸೂಕ್ತ ಸಲಹೆ ಸೂಚನೆಗಳನ್ನು ನೀಡುತ್ತಿರುತ್ತಾರೆ ಇಂಡಸ್ಟಿçÃಯಲ್ ಅಸೋಸಿಯೇಶನ್ ಹಾಗೂ ಸ್ಮಾಲ ಇಂಡಸ್ಟ್ರಿಯಲ್ ಅಸೋಸಿಯೇಶನ್ ಸಹಯೋಗದಿಂದ ಒಳ್ಳೆಯ ಸಲಹೆ ಸೂಚನೆಗಳನ್ನು ಪಡೆಯಲಾಗುತ್ತಿದೆ. ಕೈಗಾರಿಕೆಗಳನ್ನು ಸ್ಥಾಪಿಸಲು ಸೂಕ್ತ ಕ್ರಮ ವಹಿಸಲಾಗುತ್ತಿದೆ ಕೆಲವು ವೇಳೆ ಕೈಗಾರಿಕೆಗಳನ್ನು ಸ್ಥಾಪಿಸುವಲ್ಲಿ ತೊಂದರೆಗಳು ಆಗುತ್ತಿವೆ ಅಂತಹ ಸಂದರ್ಬಗಳಲ್ಲಿ ಪರಿಶೀಲಸಿ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಇಲ್ಲಿ ಆಗಮಿಸಿದ ಉದ್ದಿಮೆದಾರರ ತಮ್ಮ ಉದ್ದಿಮೆಗಳ ಮಾಹಿತಿ ಒದಗಿ ಆಗಮಿಸಿದ ಎಲ್ಲ ಉದ್ದಿಮೆದಾರರು ಈ ಕಾರ್ಯಾಗಾರಗಳ ಸದುಪಯೋಗ ಪಡಿಸಿಕೊಳ್ಳುವಂತೆ ಅವರು ತಿಳಿಸಿದರು.

ಡಿಸ್ಟ್ರಿಕ್ಟ್ ಇಂಡ್ ಸ್ಟ್ರಿಯಲ್ ಓನರ್ಸ್ ಅಸೋಸಿಯೇಶನ್ ಅಧ್ಯಕ್ಷರಾದ ಎಸ್.ವಿ ಪಾಟೀಲ್ ಮುಖ್ಯ ಅತಿಥಿಗಳಾಗಿ ಮಾತನಾಡಿ, ಇಲ್ಲಿ ಬೆಳೆದ ಕೃಷಿ ಉತ್ಪನ್ನಗಳು ಹಾಗೂ ಸಿರಿದಾನ್ಯಗಳಿಗೆ ಬಹಳ ಬೇಡಿಕೆ ಇದೆದೇಶ ವಿದೇಶಗಳಲ್ಲಿ ಹೆಚ್ಚು ಬೇಡಿಕೆ ಇದೆ ಆದರೆ ಉತ್ಪಾದನೆ ಕಡಿಮೆ ಇದೆ ಸಣ್ಣ ಕೈಗಾರಿಕೆಗಳು ಸ್ಥಾಪನೆಗೆ ಉತ್ತರ ಕರ್ನಾಟಕ ಹಾಗೂ ಈ ಬಾಗಕ್ಕೆ ಹೆಚ್ಚು ಆಧ್ಯತೆ ಪ್ರಾತಿನಿದ್ಯ  ಸಿಗಬೇಕು  ಈ ಕುರಿತು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಜಿಲ್ಲೆಯಲ್ಲಿ ಲಿಂಬೆ, ದ್ರಾಕ್ಷಿಗೆ ಸಿಗುವ ಮನ್ನನೆ ಸಿರಿ ದಾನ್ಯಕ್ಕೂ ಸಿಗುವಂತಾಗಬೇಕು ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಸಣ್ಣ ಕೈಗಾರಿಕೆ  ಉದ್ದಿಮೆದಾರರ ಹಾಗೂ ಸಂಸ್ಥೆಗಳ ಸಂಘದ ಅಧ್ಯಕ್ಷರಾದ ಗಂಗಾಧರ ಸಂಬಣ್ಣಿ, ಜಿಲ್ಲಾ ಸಣ್ಣ ಕೈಗಾರಿಕೆಗಳ ಸಂಘದ ಅಧ್ಯಕ್ಷರಾದ ಪೀಟರ್ ಅಲೇಕ್ಸಾಂಡರ, ವಿ.ಟಿ.ಪಿ.ಸಿ ಕಲಬುರ್ಗಿ ಶಾಖಾ ಸಹಾಯಕ ನಿರ್ದೇಶಕರಾದ ಜಾಫರ ಖಾಸಿಂ ಅನ್ಸಾರಿ, ಕಾಸಿಯಾ ಉಪಾಧ್ಯಕ್ಷರಾದ ಗಣೇಶ ರಾವ್.ಬಿ.ಆರ್, ಗೌರವ ಪ್ರಧಾನ ಕಾರ್ಯದರ್ಶಿ ಸುರೇಶ ಎನ್. ಸಾಗರ, ಜಂಟಿ ಕಾರ್ಯದರ್ಶಿ ಸತೀಶ ಎನ್, ಖಜಾಂಚಿ ಮಂಜುನಾಥ ಹೆಚ್, ಜಿಲ್ಲಾಭಿವೃದ್ಧಿ ಸಮಿತಿ ಉಪಸಮಿತಿ ಅಧ್ಯಕ್ಷರಾದ ನಿಂಗಣ್ಣ ಎಸ್. ಬಿರಾದಾರ, ಉದ್ದಿಮೆದಾರರು ಹಾಗೂ ಇತರರು ಉಪಸ್ಥಿತರಿದ್ದರು.

WhatsApp Group Join Now
Telegram Group Join Now
Share This Article