Ad imageAd image

ಕಬ್ಬು ಬೆಳೆಗಾರರ ಪ್ರತಿಭಟನೆ ವೇಳೆ ಗಲಾಟೆ, ಡಿವೈಎಸ್ಪಿ ಕೈ ಮುರಿತ

Nagesh Talawar
ಕಬ್ಬು ಬೆಳೆಗಾರರ ಪ್ರತಿಭಟನೆ ವೇಳೆ ಗಲಾಟೆ, ಡಿವೈಎಸ್ಪಿ ಕೈ ಮುರಿತ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಬೆಳಗಾವಿ(Belagavi): ಕಳೆದೊಂದು ವಾರಕ್ಕಿಂತ ಹೆಚ್ಚು ದಿನಗಳಿಂದ ನಡೆಯುತ್ತಿರುವ ಕಬ್ಬು ಬೆಳೆಗಾರರ ಪ್ರತಿಭಟನೆ ವೇಳೆ ಗಲಾಟೆ ನಡೆದಿದೆ. ಕಲ್ಲು ತೂರಾಟ ಸಹ ನಡೆದಿದೆ. ಈ ವೇಳೆ ಡಿವೈಎಸ್ಪಿ ಅವರ ಕೈ ಮುರಿತವಾಗಿದೆ ಎಂದು ಹೇಳಲಾಗುತ್ತಿದೆ. ಹರ್ತಗಿ ಕ್ರಾಸ್ ಬಳಿ ನಡೆಯುತ್ತಿರುವ ಪ್ರತಿಭಟನೆ ತೀವ್ರಗೊಂಡಿದೆ. ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್ ನಡೆಸಿ ಆಕ್ರೋಶ ವ್ಯಕ್ತಪಡಿಸಲಾಗುತ್ತಿದೆ.

ರಸ್ತೆ ಬಂದ್ ಆಗಿದ್ದರಿಂದ ಕಿಲೋ ಮೀಟರ್ ಗಟ್ಟಲೆ ವಾಹನಗಳು ಸಾಲು ಗಟ್ಟಿ ನಿಂತವು. ಹೀಗಾಗಿ ಪೊಲೀಸರು ರಸ್ತೆ ಬಂದ್ ಮಾಡದಂತೆ ಮನವೊಲಿಸಲು ಯತ್ನಿಸಿದ್ದಾರೆ. ಈ ವೇಳೆ ನೂಕಾಟ, ತಳ್ಳಾಟ ನಡೆದಿದೆ. ಆಗ ಡಿವೈಎಸ್ಪಿಯವರ ಕೈ ಮುರಿತವಾಗಿದೆ. ನೂರಾರು ರೈತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

WhatsApp Group Join Now
Telegram Group Join Now
Share This Article