Ad imageAd image

ಮಠಾಧೀಶರುಗಳ ವಿರುದ್ಧ ಎಫ್‌ಐಆರ್‌ ಖಂಡನೀಯ: ನಿಂಗರಾಜ ಅತನೂರ

Nagesh Talawar
ಮಠಾಧೀಶರುಗಳ ವಿರುದ್ಧ ಎಫ್‌ಐಆರ್‌ ಖಂಡನೀಯ: ನಿಂಗರಾಜ ಅತನೂರ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಸಿಂದಗಿ(Sindagi): ತುಮಕೂರು ಹೇಮಾವತಿ ಎಕ್ಸ್ ಪ್ರೆಸ್ ಲಿಂಕ್ ಕಾಲುವೆ ಕಾಮಗಾರಿ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಬೆಂಬಲ ನೀಡಿದ್ದ ಮಠಾಧೀಶರುಗಳ ವಿರುದ್ಧ ರಾಜ್ಯ ಸರ್ಕಾರ ಪ್ರಕರಣ ದಾಖಲಿಸಿರುವುದು ಖಂಡನೀಯ. ಒಂದು ವೇಳೆ ಮಠಾಧೀಶರ ಮೇಲೆ ಹಾಕಿರುವ ಪ್ರಕರಣಗಳು ಹಿಂಪಡೆಯದಿದ್ದರೆ ರಾಜ್ಯಾದ್ಯಂತ ದೊಡ್ಡ ಮಟ್ಟದ ಹೋರಾಟ ಮಾಡಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘ ಯುವ ಘಟಕದ ರಾಜ್ಯಾಧ್ಯಕ್ಷ ನಿಂಗರಾಜ ಅತನೂರ ಹೇಳಿದ್ದಾರೆ.

ಮಠಾಧೀಶರಿಂದ ತುಮಕೂರು ಜಿಲ್ಲೆ ಇಡೀ ದೇಶಕ್ಕೆ ಮಾದರಿಯಾದ ಜಿಲ್ಲೆ ಅನ್ನ, ವಸತಿ, ಶಿಕ್ಷಣವನ್ನು ದಾನ ಮಾಡಿ ಸಮಾಜ ಕಾಪಾಡುವ ಕಾಯಕದಲ್ಲಿ ನಿರತರಾಗಿರುವ ಮಠಾಧೀಶರುಗಳ ಮೇಲೆ ಕೊಲೆ ಯತ್ನದ ಪ್ರಕರಣವನ್ನು  ದಾಖಲೆ ಮಾಡಿರುವುದು ಶೋಚನೀಯ ಸಂಗತಿಯಾಗಿದೆ. ಜಿಲ್ಲೆಯ ಹಿತಕ್ಕಾಗಿ ಐತಿಹಾಸಿಕ ನೀರಾವರಿ ಹೋರಾಟದಲ್ಲಿ ಭಾಗವಹಿಸಿದ್ದ ಮಠಾಧೀಶರನ್ನು ಹಿಮ್ಮೆಟ್ಟಿಸುವ ಕಾರ್ಯವನ್ನು ರಾಜ್ಯ ಸರ್ಕಾರ ಮಾಡುತ್ತಿದೆ. ಸರ್ಕಾರದ ನಡೆಯನ್ನು ಖಂಡಿಸಲಾಗುತ್ತದೆ. ಈ ಕೂಡಲೇ ಮಠಾಧೀಶರ ಮೇಲೆ ದಾಖಲಾದ ಪ್ರಕರಣವನ್ನು ಹಿಂಪಡೆಯಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Group Join Now
Telegram Group Join Now
Share This Article