Ad imageAd image

ರಾಮನಗರ: ಭೀಕರ ಅಪಘಾತಕ್ಕೆ ಒಂದೇ ಕುಟುಂಬದ ಐವರ ಸಾವು

Nagesh Talawar
ರಾಮನಗರ: ಭೀಕರ ಅಪಘಾತಕ್ಕೆ ಒಂದೇ ಕುಟುಂಬದ ಐವರ ಸಾವು
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ರಾಮನಗರ(Ramanagara): ಜಿಲ್ಲೆಯ ಮಾಗಡಿ ತಾಲೂಕಿನ ಗುಡೆಮಾರನಹಳ್ಳಿ ಹತ್ತಿರ ಕಾರೊಂದು(Car) ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಐವರು ಮೃತಪಟ್ಟ ಘಟನೆ ಮಂಗಳವಾರ ಸಂಜೆ ನಡೆದಿದೆ. ಅತಿ ವೇಗವಾಗಿ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಇಂತಹದೊಂದು ಅನಾಹುತ ಸಂಭವಿಸಿದೆ.

ಕುಣಿಗಲ್ ನಿಂದ ಬೆಂಗಳೂರು ಕಡೆಗೆ ಹೊರಟಿದ್ದಾಗ ಅಪಘಾತ ನಡೆದಿದೆ. ಮಾರುತಿ ಸುಜುಕಿ ಎರ್ಟಿಗಾ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ. ಕಾರಿನ ಏರ್ ಬ್ಯಾಗ್ ಓಪನ್ ಆಗಿದ್ದರೂ ಸಹ ಐವರು ಮೃತಪಟ್ಟಿದ್ದಾರೆ. ಕಾರು ಎಷ್ಟೊಂದು ವೇಗದಲ್ಲಿತ್ತು ಅನ್ನೋದು ಅದರ ಸ್ಥಿತಿ ಹಾಗೂ ಐವರ ಸಾವು ನೋಡಿದರೆ ತಿಳಿಯುತ್ತೆ. ಇನ್ನು ಗುಂಡ್ಲಪೇಟೆ ಪಟ್ಟಣದ ಹೊರವಲಯದಲ್ಲಿ ಬೈಕ್ ಹಾಗೂ ಟಿಪ್ಪರ್ ನಡುವೆ ಅಪಘಾತವಾಗಿ(Accident) ಗಂಡ, ಹೆಂಡತಿ ಹಾಗೂ ಮಗ ಮೃತಪಟ್ಟಿದ್ದಾರೆ.

WhatsApp Group Join Now
Telegram Group Join Now
Share This Article