Ad imageAd image

ರಾಜ್ಯಪಾಲರ ವಿರುದ್ಧ ನಾಳೆ ಪಂಜಿನ ಮೆರವಣಿಗೆ

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ನಡೆಯನ್ನು ಖಂಡಿಸಿ

Nagesh Talawar
ರಾಜ್ಯಪಾಲರ ವಿರುದ್ಧ ನಾಳೆ ಪಂಜಿನ ಮೆರವಣಿಗೆ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ಮುಡಾ(MUDA Scam) ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲ(governor)ಥಾವರ್ ಚಂದ್ ಗೆಹ್ಲೋಟ್ ಅವರ ನಡೆಯನ್ನು ಖಂಡಿಸಿ ಬುಧವಾರ ಸಂಜೆ 6 ಗಂಟೆಗೆ ಪಂಜಿನ ಮೆರವಣಿಗೆ ಕರೆ ನೀಡಲಾಗಿದೆ. ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ವಿದ್ಯಾರ್ಥಿ ಘಟಕದಿಂದ ಮಂಜಿನ ಮೆರವಣಿಗೆ ಕರೆ ಕೊಡಲಾಗಿದೆ.

ಬೆಂಗಳೂರು ವಿಶ್ವವಿದ್ಯಾಲಯದ ವಿವಿಧ ವಿದ್ಯಾರ್ಥಿ ಸಂಘಟನೆಗಳು, ಹೊರ ಜಿಲ್ಲೆಯ ಹಲವು ವಿದ್ಯಾರ್ಥಿ ಸಂಘಟನೆಗಳು ಇದರಲ್ಲಿ ಭಾಗವಹಿಸಲಿವೆ. ಗಾಂಧಿನಗರದ ಮೌರ್ಯ ವೃತ್ತದಿಂದ ಮೆರವಣಿಗೆ ನಡೆಯಲಿದೆ. ಕೇಂದ್ರ ಸರ್ಕಾರದ ಕೈಗೊಂಬೆಯಂತೆ ಕೆಲಸ ಮಾಡಿದರೆ ಗೋ ಬ್ಯಾಕ್ ಗವರ್ನರ್ ಹೋರಾಟ ಪ್ರಾರಂಭಿಸಬೇಕಾಗುತ್ತದೆ ಎಂದು ಹೇಳಲಾಗಿದೆ. ಇನ್ನು ಇದೇ 27ರಂದು ರಾಜಭವನ ಚಲೋ ನಡೆಸುತ್ತಿದ್ದು, ಫ್ರೀಡಂ ಪಾರ್ಕ್ ನಿಂದ ಪ್ರತಿಭಟನಾ ಮೆರವಣಿಗೆ ನಡೆಸಿ ರಾಜಭವನ ಮುತ್ತಿಗೆ ಹಾಕಲಾಗುವುದು ಎಂದಿದ್ದಾರೆ.

WhatsApp Group Join Now
Telegram Group Join Now
Share This Article