Ad imageAd image

ವಿಜಯಪುರ: ರಸ್ತೆ ದಾಟುವಾಗ ಬೈಕ್ ಡಿಕ್ಕಿ, ನಾಲ್ವರ ಸಾವು

ಮೂತ್ರ ವಿಸರ್ಜನೆಗೆಂದು ರಸ್ತೆ ದಾಟುತ್ತಿದ್ದಾಗ ಬೈಕ್ ಡಿಕ್ಕಿಯಾದ ಪರಿಣಾಮ ನಾಲ್ವರು ಮೃತಪಟ್ಟು, ನಾಲ್ವರು ಗಾಯಗೊಂಡಿದ್ದಾರೆ.

Nagesh Talawar
ವಿಜಯಪುರ: ರಸ್ತೆ ದಾಟುವಾಗ ಬೈಕ್ ಡಿಕ್ಕಿ, ನಾಲ್ವರ ಸಾವು
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ವಿಜಯಪುರ(Vijayapura): ಮೂತ್ರ ವಿಸರ್ಜನೆಗೆಂದು ರಸ್ತೆ ದಾಟುತ್ತಿದ್ದಾಗ ಬೈಕ್ ಡಿಕ್ಕಿಯಾದ ಪರಿಣಾಮ ನಾಲ್ವರು(Death) ಮೃತಪಟ್ಟು, ನಾಲ್ವರು ಗಾಯಗೊಂಡಿದ್ದಾರೆ. ಓರ್ವನ ಸ್ಥಿತಿ ಗಂಭೀರವಾಗಿದೆ. ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಕುಂಟೋಜಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಬೈಕ್(Bike) ಡಿಕ್ಕಿಯಾಗಿ ಇಬ್ಬರು ಪಾದಚಾರಿಗಳು ಹಾಗೂ ಬೈಕ್ ಸವಾರರಿಬ್ಬರು ಸೇರಿ ನಾಲ್ವರು ಮೃತಪಟ್ಟಿದ್ದಾರೆ ಎಂದರೆ ಬೈಕ್ ಎಷ್ಟೊಂದು ವೇಗದಲ್ಲಿತ್ತು ಎನ್ನುವ ಪ್ರಶ್ನೆ ಮೂಡಿದೆ.

ತಾಳಿಕೋಟೆ ತಾಲೂಕಿನ ಗೋಟಖಂಡಕಿ ಗ್ರಾಮದ ಯುವಕರಾದ ಅನಿಲ್ ಖೈನೂರ, ರಾಯಪ್ಪ ಬಾಗೇವಾಡಿ, ಕುಮಾರ ಪ್ಯಾಟಿ ಹಾಗೂ ಚೌಡಕಿ ಎನ್ನುವ ನಾಲ್ವರು ಮೃತಪಟ್ಟಿದ್ದಾರೆ. ಜಾತ್ರೆಯ ಸಲುವಾಗಿ ಇವರೆಲ್ಲ ಬಂದಿದ್ದರು. ಗುಂಪಾಗಿ ಹೋಗುತ್ತಿದ್ದಾಗ ಕಳೆದ ರಾತ್ರಿ ಇಂತಹದೊಂದು ಅಪಘಾತ(Accident) ಸಂಭವಿಸಿದೆ.

WhatsApp Group Join Now
Telegram Group Join Now
Share This Article