Ad imageAd image

ವಿವಿಧ ಗ್ರಾಮಗಳಲ್ಲಿನ ಕಾಮಗಾರಿ ಪರಿಶೀಲನೆ ನಡೆಸಿದ ಜಿ.ಪಂ ಸಿಇಒ

ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಅವರು ವಿಜಯಪುರ ತಾಲೂಕಿನ ಹೆಗಡಿಹಾಳ ಮತ್ತು ಹಿಟ್ಟಿನಹಳ್ಳಿ ಗ್ರಾಮ ಪಂಚಾಯತಿಗಳಿಗೆ ಭೇಟಿ ನೀಡಿ

Nagesh Talawar
ವಿವಿಧ ಗ್ರಾಮಗಳಲ್ಲಿನ ಕಾಮಗಾರಿ ಪರಿಶೀಲನೆ ನಡೆಸಿದ ಜಿ.ಪಂ ಸಿಇಒ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ವಿಜಯಪುರ(Vijayapura): ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಅವರು ವಿಜಯಪುರ ತಾಲೂಕಿನ ಹೆಗಡಿಹಾಳ ಮತ್ತು ಹಿಟ್ಟಿನಹಳ್ಳಿ ಗ್ರಾಮ ಪಂಚಾಯತಿಗಳಿಗೆ ಭೇಟಿ ನೀಡಿ ವಿವಿಧ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು. ಶುಕ್ರವಾರ ಹೆಗಡಿಹಾಳ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಉಕುಮನಾಳ ಗ್ರಾಮದಲ್ಲಿ ಹೊಸ ಕಟ್ಟಡದ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ  ಪರಿಶೀಲನೆ ನಡೆಸಿದರು. ಮಕ್ಕಳಿಗೆ ನಿಯಮಿತವಾಗಿ ಪೌಷ್ಠಿಕ ಆಹಾರ ಮತ್ತು ಮಕ್ಕಳಿಗೆ ಕುಳಿತುಕೊಳ್ಳಲು ಪೀಠೋಪಕರಣಗಳನ್ನು ಒದಗಿಸುವಂತೆ  ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ಸೂಚಿಸಿದರು.

ಹೆಗಡಿಹಾಳ ಗ್ರಾಮದ ಎಚ್.ಪಿ.ಎಸ್ ಶಾಲೆಗೆ ಭೇಟಿ ನೀಡಿ ಮಹಾತ್ಮ ಗಾಂಧಿ ನರೇಗಾ  ಯೋಜನೆಯಡಿ ಅನುಷ್ಠಾನಗೊಳಿಸಿದ ಕಾಮಗಾರಿಗಳ ಪರಿಶೀಲನೆ ನಡೆಸಿದರು. ಸರ್ಕಾರಿ ಶಾಲೆಯಲ್ಲಿ ಭೋಜನಾಲಯ ಮತ್ತು ಅಡುಗೆ ಕೋಣೆ ಕಾಮಗಾರಿಗಳನ್ನು ತುರ್ತಾಗಿ ಪೂರ್ಣಗೊಳಿಸಬೇಕು. ಶಾಲಾ ಆವರಣದಲ್ಲಿ ಪೌಷ್ಠಿಕ ಕೈತೋಟ ಹಾಗೂ ಶಾಲಾ ಕಂಪೌಂಡ್ ಸುತ್ತಲು ಸಸಿ ನೆಡಲು ಸಂಬಂಧಿಸಿದವರಿಗೆ ಸೂಚಿಸಿದರು. ಗ್ರಾಮ ಪಂಚಾಯತಿಯ ಆವರಣದಲ್ಲಿರುವ ಗ್ರಂಥಾಲಯಕ್ಕೆ ಭೇಟಿ ನೀಡಿ ದೇಶದ ಮಹಾನ್ ವ್ಯಕ್ತಿಗಳ ಭಾವಚಿತ್ರಗಳನ್ನು ಹಾಗೂ ರ‍್ಯಾಕ್‌ಗಳಲ್ಲಿ ವಿವಿಧ ಪುಸ್ತಕಗಳನ್ನು ಇರಿಸುವಂತೆ ಹಾಗೂ ಅರಿವು ಕೇಂದ್ರದ ನಾಮಫಲಕವನ್ನು ಅಳವಡಿಸುವಂತೆ ಗ್ರಂಥಪಾಲಕರಿಗೆ ಸೂಚಿಸಿದರು. ಬಳಿಕ ಅಂಗನವಾಡಿ ಕೇಂದ್ರ ಹಾಗೂ ಶಿಶು ಪಾಲನಾ ಕೇಂದ್ರಗಳಿಗೆ ಭೇಟಿ ನೀಡಿ, ಅಂಗನವಾಡಿ ಕಾರ್ಯಕರ್ತರಿಗೆ ಮತ್ತು ಶಿಶುಪಾಲನಾ ಕೇಂದ್ರದ ಮಕ್ಕಳ ಆರೈಕೆದಾರರಿಗೆ ಕೇಂದ್ರಗಳಲ್ಲಿ ಮಕ್ಕಳಿಗೆ ಪ್ರತಿದಿನ ಉತ್ತಮ ಗುಣಮಟ್ಟವುಳ್ಳ ಪೌಷ್ಠಿಕ ಆಹಾರ ಒದಗಿಸಬೇಕು ಮತ್ತು ಕೇಂದ್ರಗಳಲ್ಲಿ ಸ್ವಚ್ಛತೆಯನ್ನು ಕಾಪಾಡಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ವಿವಿಧ ದಾಖಲೆಗಳನ್ನು ಪರಿಶೀಲನೆ ನಡೆಸಿದರು. ನಂತರ ಹಿಟ್ಟಿನಹಳ್ಳಿ ಗ್ರಾಮ ಪಂಚಾಯತಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಉತ್ನಾಳ ಗ್ರಾಮದಲ್ಲಿ ರಸ್ತೆ ಬದಿಯಲ್ಲಿ ಪ್ರಗತಿ ಹಂತದಲ್ಲಿರುವ ಜಲಧಾರೆ ಕಾಮಗಾರಿ ವೀಕ್ಷಣೆ ಮಾಡಿದರು. ಹಿಟ್ಟಿನಹಳ್ಳಿ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಬರುವ ಸ್ಮಶಾನ ಅಭಿವೃದ್ಧಿ ಕಾಮಗಾರಿಯನ್ನು ವೀಕ್ಷಿಸಿದ ಅವರು, ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಭೇಟಿ ನೀಡಿ, ಪ್ರತಿದಿನ ಸಂಗ್ರಹಿಸಿರುವ ಕಸವನ್ನು ವಿಂಗಡಣೆ ಮಾಡುವಂತೆ ಸಮಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಹಿಟ್ಟಿನಹಳ್ಳಿ ಗ್ರಾಮದ ಅಮೃತ ಸರೋವರ ಕಾಮಗಾರಿಯನ್ನು ವೀಕ್ಷಣೆ ಮಾಡಿ, ಕೆರೆಯ ದಡದಲ್ಲಿ ವಿವಿಧ ರೀತಿಯ ಸಸಿಗಳನ್ನು ನೆಟ್ಟು ಸೌಂದರ್ಯೀಕರಣಗೊಳಿಸಲು ಸೂಚಿಸಿದರು. ಬಳಿಕ ಗ್ರಂಥಾಲಯಕ್ಕೆ ಭೇಟಿ ನೀಡಿ ಅಲ್ಲಿನ ಮಕ್ಕಳಿಗೆ ಸ್ಮಾರ್ಟಫೋನ್ಗಳಲ್ಲಿ ‘ಓದುಬೆಳಕು ಆಪ್ ನ್ನು ಮಕ್ಕಳು ಬಳಕೆ ಮಾಡುತ್ತಿರುವುದನ್ನು ಕಂಡು ಸಂತೋಷ ವ್ಯಕ್ತಪಡಿಸಿದರು. ಶಿಶುಪಾಲನ ಕೇಂದ್ರ ಮತ್ತು ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಮಕ್ಕಳ ಓದುವಿಕೆ ಹಾಗೂ ಕಲಿಕಾ ವಿಧಾನವನ್ನು ಕಂಡು ಹರ್ಷ ವ್ಯಕ್ತಪಡಿಸಿದರು.

WhatsApp Group Join Now
Telegram Group Join Now
Share This Article