ಪ್ರಜಾಸ್ತ್ರ ಸುದ್ದಿ
ತುಮಕೂರು(Tumakoru): ಭಾನುವಾರ ಎಲ್ಲೆಡೆ 9 ದಿನದ ಗಣೇಶ(Ganesh Festival) ವಿಸರ್ಜನೆ ಮಾಡಲಾಗುತ್ತಿದೆ. ಹೀಗಿ ನಡೆಯುತ್ತಿರುವ ಗಣೇಶ ವಿಸರ್ಜನೆ ವೇಳೆ ತಂದೆ, ಮಗ ಸೇರಿ ಮೂವರು ನೀರುಪಾಲದ ಘಟನೆ ತುರುವೇಕೆರೆ ತಾಲೂಕಿನ ಮಾರಸಂದ್ರ ಗ್ರಾಮದ ಹತ್ತಿರದ ರಂಗನಹಟ್ಟಿ ಕೆರೆಯಲ್ಲಿ ನಡೆದಿದೆ. ಈ ಮೂವರು ಸಾವನ್ನಪ್ಪಿರುವ ಶಂಕೆಯಿದೆ. ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯ ನಡೆಸಿದ್ದಾರೆ.
ರೇವಣ್ಣ(46), ಇವರ ಮಗ ಶರತ್(26) ಹಾಗೂ ದಯಾನಂದ ಎಂದು ಗುರುತಿಸಲಾಗಿದೆ. ಇವರನ್ನು ಹುಡುಕಾಟ ನಡೆಸಲಾಗುತ್ತಿದೆ. ಸ್ಥಳಕ್ಕೆ ದಂಡಿನಶಿವರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದುವರೆಗೂ ಮೂವರು ಪತ್ತೆಯಾಗಿಲ್ಲವೆಂದು ಹೇಳಲಾಗುತ್ತಿದೆ. ಇವರು ಕೆರೆಯಲ್ಲಿ ನಾಪತ್ತೆಯಾಗಿದ್ದು ಹೇಗೆ ಎನ್ನುವ ಪ್ರಶ್ನೆ ಮೂಡಿದೆ.