ಪ್ರಜಾಸ್ತ್ರ ಸುದ್ದಿ
ರಾಯಚೂರು(raichur): ಕೆಎಸ್ಆರ್ ಟಿಸಿ(KSRTC) ಬಸ್ ಹಾಗೂ ಶಾಲೆ(School Bus) ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಇದರಿಂದಾಗಿ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದು, 32 ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಗ್ರಾಮದ ಹತ್ತಿರ ಗುರುವಾರ ನಡೆದಿದೆ. ಘಟನೆಯಲ್ಲಿ ಮೂವರು ವಿದ್ಯಾರ್ಥಿಗಳ ಕೈ, ಕಾಲು ಕಟ್ ಆಗಿದ್ದು, ಪೋಷಕರು ಆಕ್ರಂದನ ಮುಗಿಲು ಮುಟ್ಟಿದೆ. 7 ವರ್ಷದ ಸಮರ್ಥ ಹಾಗೂ 12 ವರ್ಷದ ಶ್ರೀಕಾಂತ್ ಮೃತ ಅಮಾಯಕ ವಿದ್ಯಾರ್ಥಿಗಳು.
ಗಾಯಗೊಂಡವರಲ್ಲಿ 18 ವಿದ್ಯಾರ್ಥಿಗಳನ್ನು ರಿಮ್ಸ್ ಗೆ, 12 ವಿದ್ಯಾರ್ಥಿಗಳು(Students) ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಗಳ ಮುಂದೆ ವಿದ್ಯಾರ್ಥಿಗಳ ಪೋಷಕರು ಜಮಾಯಿಸಿದ್ದು, ಕಣ್ಣೀರಿನಲ್ಲಿ ಕೈತೊಳೆಯುತ್ತಿದ್ದಾರೆ. ಈ ಕುರಿತು ಜಿಲ್ಲಾಧಿಕಾರಿ ಕೆ.ನಿತೇಶ್ ಮಾತನಾಡಿದ್ದು, ಮೃತ ವಿದ್ಯಾರ್ಥಿಗಳ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರ ಹಾಗೂ ಗಾಯಾಳುಗಳ ಚಿಕಿತ್ಸೆಗಾಗಿ 3 ಲಕ್ಷ ರೂಪಾಯಿ ನೆರವು ನೀಡಲು ಸಿಎಂ ಸೂಚಿಸಿದ್ದಾರೆ ಎಂದು ತಿಳಿಸಿದ್ದಾರೆ.