ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ದಲಿತ ಮುಖ್ಯಮಂತ್ರಿ ವಿಚಾರವನ್ನು ಸಚಿವ ಹೆಚ್.ಸಿ ಮಹಾದೇವಪ್ಪ ಅವರು ಪ್ರಸ್ತಾಪಿಸಿದ್ದಾರೆ ಅನ್ನೋ ಪ್ರಶ್ನೆಗೆ ಉತ್ತರಿಸಿದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಅವರು ನಮ್ಮ ರಾಷ್ಟ್ರೀಯ ನಾಯಕರು. ಇಲ್ಲಿಂದಲೇ ಅವರಿಗೆ ನಮಸ್ಕಾರ ಎನ್ನುವ ಮೂಲಕ ಕಾಲೆಳೆದಿದ್ದಾರೆ.
ಇನ್ನು ಶಾಲೆಗಳಲ್ಲಿ ಮೊಬೈಲ್ ನಿಷೇಧದ ಬಗ್ಗೆ ಚರ್ಚೆ ನಡೆಯುತ್ತಿದೆ. ಹಲವು ದೇಶಗಳಲ್ಲಿ ಈಗಾಗ್ಲೇ ನಿಷೇಧ ಮಾಡಲಾಗಿದೆ. ಈ ಬಗ್ಗೆ ಪೋಷಕರಿಂದಲೂ ಒತ್ತಡವಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಈ ಕುರಿತು ಚರ್ಚೆ ನಡೆಯುತ್ತಿದೆ. ಈ ವಿಚಾರ ಚರ್ಚೆ ನಡೆಸಲಾಗುತ್ತಿದೆ ಅಂತಾ ಹೇಳಿದರು.




