Ad imageAd image

ಸಿದ್ದರಾಮಯ್ಯ ರಾಜೀನಾಮೆ ಕೇಳುವ ಕುಮಾರಸ್ವಾಮಿಗೆ ಜವಾಬ್ದಾರಿ ಬೇಡ್ವಾ: ಜಿಟಿಡಿ

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಯನ್ನು ಬಿಜೆಪಿ, ಜೆಡಿಎಸ್ ನಾಯಕರು ಕೇಳುತ್ತಿದ್ದಾರೆ.

Nagesh Talawar
ಸಿದ್ದರಾಮಯ್ಯ ರಾಜೀನಾಮೆ ಕೇಳುವ ಕುಮಾರಸ್ವಾಮಿಗೆ ಜವಾಬ್ದಾರಿ ಬೇಡ್ವಾ: ಜಿಟಿಡಿ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಮೈಸೂರು(Mysore): ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಯನ್ನು ಬಿಜೆಪಿ, ಜೆಡಿಎಸ್ ನಾಯಕರು ಕೇಳುತ್ತಿದ್ದಾರೆ. ಈ ಬಗ್ಗೆ ಗುರುವಾರ ದಸರಾ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿರುವ ಜೆಡಿಎಸ್ ಶಾಸಕ ಜಿ.ಟಿ(G.T.Devegowda) ದೇವೇಗೌಡ, 136 ಸ್ಥಾನ ಗೆದ್ದು ಸಿಎಂ ಆಗಿರುವ ಸಿದ್ದರಾಮಯ್ಯ(Siddaramaih) ರಾಜೀನಾಮೆ ನೀಡುವ ಅಗತ್ಯವಿಲ್ಲ. ರಾಜೀನಾಮೆ ಕೇಳುವ ಕುಮಾರಸ್ವಾಮಿಗೆ ಜವಾಬ್ದಾರಿ ಬೇಡ್ವಾ. ಕೇಂದ್ರ ಮಂತ್ರಿಯಾಗಿದ್ದಾರೆ. ಕೇಂದ್ರದಿಂದ ರಾಜ್ಯಕ್ಕೆ ಏನು ತರಬೇಕು ಅದನ್ನು ಮಾಡಿ ಎಂದು ಸ್ವಪಕ್ಷೀಯ ನಾಯಕನ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಎಫ್ಐಆರ್(FIR) ಆಗಿದೆ ರಾಜೀನಾಮೆ ಕೊಡಿ ಎಂದರೆ, ಯಾರ ಮೇಲೆಲ್ಲ ಎಫ್ಐಆರ್ ಆಗಿದೆ ಅವರೆಲ್ಲ ವಿಧಾನಸೌಧ ಮುಂದೆ ಬನ್ನಿ. ಅವರೆಲ್ಲರೂ ರಾಜೀನಾಮೆ ಕೊಡಲಿ ನೋಡೋಣ. ಎಫ್ಐಆರ್ ಆಗಿ ಪ್ರಕರಣ ಎದುರಿಸುತ್ತಿರುವ ಕುಮಾರಸ್ವಾಮಿಗೆ(HDK) ರಾಜೀನಾಮೆ ಕೊಡಿ ಎಂದರೆ ಕೊಡುತ್ತಾರ ಎಂದು ಪ್ರಶ್ನಿಸಿದರು. ಜಿಟಿಡಿ ಭಾಷಣಕ್ಕೆ ಕಾಂಗ್ರೆಸ್ ನಾಯಕರು ಫುಲ್ ಖುಷಿಯಾಗಿದ್ದಾರೆ. ಕೆಲವರು ಎದ್ದು ನಿಂತು ಗೌರವ ಸೂಚಿಸಿದರು. ಕೆಲವರು ಹಸ್ತಲಾಘವ ಮಾಡಿ ಅಭಿನಂದನೆ ಸಲ್ಲಿಸಿದರು.

WhatsApp Group Join Now
Telegram Group Join Now
Share This Article