Ad imageAd image

ಹರಿಯಾಣ ನಾಶ ಮಾಡಿದ ಬಿಜೆಪಿ: ರಾಹುಲ್ ಗಾಂಧಿ

ಹರಿಯಾಣ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಅಸ್ಸಂದ್ ನಲ್ಲಿ ನಡೆದ ಪ್ರಚಾರದಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

Nagesh Talawar
ಹರಿಯಾಣ ನಾಶ ಮಾಡಿದ ಬಿಜೆಪಿ: ರಾಹುಲ್ ಗಾಂಧಿ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಚಂಡೀಗಢ(chandigarh): ಹರಿಯಾಣ ವಿಧಾನಸಭಾ ಚುನಾವಣೆಯ(Election) ಹಿನ್ನಲೆಯಲ್ಲಿ ಅಸ್ಸಂದ್ ನಲ್ಲಿ ನಡೆದ ಪ್ರಚಾರದಲ್ಲಿ ಕಾಂಗ್ರೆಸ್ ಸಂಸದ ರಾಹುಲ್(Rahul Gandhi)ಗಾಂಧಿ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಹರಿಯಾಣವನ್ನು ಬಿಜೆಪಿ ಸಂಪೂರ್ಣ ನಾಶ ಮಾಡಿದೆ. ಹೀಗಾಗಿ ಇಲ್ಲಿಯ ಜನರು ವಲಸೆ ಹೋಗುತ್ತಿದ್ದಾರೆ. ಇತ್ತೀಚೆಗೆ ಅಮೆರಿಕಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿನ ಅಲ್ಲಿ ನೆಲೆಸಿರುವ ಹರಿಯಾಣದ ವಲಸಿಗರನ್ನು ಭೇಟಿಯಾಗಿ ಮಾತನಾಡಿದ್ದೇನೆ ಎಂದರು.

ಪ್ರಧಾನಿ ಮೋದಿಯವರು ದೇಶದ ಉದ್ಯೋಗ ವ್ಯವಸ್ಥೆಯನ್ನು ಸಂಪೂರ್ಣ ನಾಶ ಮಾಡಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಉದ್ಯೋಗ ಸಿಗದೆ ತಮ್ಮ ಭವಿಷ್ಯಕ್ಕಾಗಿ ಜನರು ವಲಸೆ ಹೋಗುತ್ತಿದ್ದಾರೆ. ಇದಕ್ಕೆ ಕಾಂಗ್ರೆಸ್ ಪರಿಹಾರ ನೀಡಲಿದೆ. ಈ ಬಾರಿ ಕಾಂಗ್ರೆಸ್ ಗೆಲ್ಲುವ ವಿಶ್ವಾಸವಿದೆ ಎಂದ ಅವರು, ಕಾಂಗ್ರೆಸ್ಸಿನಿಂದ ಮಹಿಳೆಯರಿಗೆ ತಿಂಗಳಿಗೆ 2 ಸಾವಿರ ರೂಪಾಯಿ, 500 ರೂಪಾಯಿಗೆ ಸಿಲಿಂಡರ್, ರಾಜ್ಯದಲ್ಲಿ ಖಾಲಿಯಿರುವ ಹುದ್ದೆಗಳ ನೇಮಕಾತಿ ಸೇರಿ ಪ್ರಣಾಳಿಕೆಯಲ್ಲಿನ ಹಲವು ವಿಚಾರಗಳನ್ನು ಪ್ರಸ್ತಾಪಿಸಿದರು.

WhatsApp Group Join Now
Telegram Group Join Now
Share This Article