ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಬುಧವಾರ ಆರ್ ಸಿಬಿ ವಿಜಯೋತ್ಸವ ಕಾರ್ಯಕ್ರಮದ ವೇಳೆ ನಡೆದ ಕಾಲ್ತುಳಿತದಲ್ಲಿ 11 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಈ ಸಂಬಂಧ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಛಾಟಿ ಬೀಸಿದೆ. ಸ್ವಯಂ ಪ್ರೇರಿತ ದೂರು ದಾಖಲಾಗಿತ್ತು. ಇದರ ವಿಚಾರಣೆ ನಡೆಸಿದ ಹೈಕೋರ್ಟ್ ನಾಲ್ಕು ಪ್ರಶ್ನೆಗಳನ್ನು ಕೇಳಿ ವಿಚಾರಣೆಯನ್ನು ಮುಂದೂಡಿದೆ.
ಎರಡು ಕಡೆ ಯಾಕೆ ಕಾರ್ಯಕ್ರಮ ಆಯೋಜಿಸಲಾಗಿತ್ತು? ಸ್ಟೇಡಿಯಂ ಬಳಿ ಸರ್ಕಾರದಿಂದ ಏನು ಕ್ರಮ ಕೈಗೊಳ್ಳಲಾಗಿತ್ತು? ಜನರ ನಿಯಂತ್ರಣಕ್ಕೆ ಏನೆಲ್ಲ ಕ್ರಮ ತೆಗೆದುಕೊಳ್ಳಲಾಗಿತ್ತು? ಆಟಗಾರರು ಯಾವ ದೇಶಕ್ಕೆ ಆಡಿದ್ದಾರೆ ಎಂದು ಸನ್ಮಾನ? ಈ ನಾಲ್ಕು ಪ್ರಶ್ನೆಗಳನ್ನು ಕೇಳಿದ್ದು, ವರದಿ ಸಲ್ಲಿಸುವಂತೆ ಹೇಳಿ ಜೂನ್ 10ಕ್ಕೆ ವಿಚಾರಣೆಯನ್ನು ನ್ಯಾಯಮೂರ್ತಿ ಜೋಶಿ ಪೀಠ ಮುಂದೂಡಿದೆ.