Ad imageAd image

ಲಂಚಕ್ಕೆ ಬೇಡಿಕೆ, ಹಾಸ್ಟೆಲ್ ವಾರ್ಡನ್ ತಡರಾತ್ರಿ ಲೋಕಾಯುಕ್ತರ ವಶಕ್ಕೆ

ತಡರಾತ್ರಿ ಲಂಚ ಪಡೆಯುತ್ತಿದ್ದ ಹಾಸ್ಟೆಲ್ ವಾರ್ಡನ್ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾನೆ. ಮೆಟ್ರಿಕ್ ನಂತರದ ವಿದ್ಯಾರ್ಥಿ

Nagesh Talawar
ಲಂಚಕ್ಕೆ ಬೇಡಿಕೆ, ಹಾಸ್ಟೆಲ್ ವಾರ್ಡನ್ ತಡರಾತ್ರಿ ಲೋಕಾಯುಕ್ತರ ವಶಕ್ಕೆ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಕಲಬುರಗಿ(Kalaburagi): ತಡರಾತ್ರಿ ಲಂಚ ಪಡೆಯುತ್ತಿದ್ದ ಹಾಸ್ಟೆಲ್ ವಾರ್ಡನ್(Hostel warden) ಲೋಕಾಯುಕ್ತರ ಬಲೆಗೆ ಬಿದ್ದಿದ್ದಾನೆ. ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯದ ವಾರ್ಡನ್ ಶಿವಶರಣಪ್ಪ ಎಂಬುವರು ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತರು(karnataka lokayukta) ವಶಕ್ಕೆ ಪಡೆದಿದ್ದಾರೆ. ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯದ ವಾರ್ಡನ್ ಆಗಿ ಶಿವಶರಣಪ್ಪ ಕೆಲಸ ನಿರ್ವಹಿಸುತ್ತಿದ್ದಾರೆ.

ಅಡುಗೆ ಸಹಾಯಕ ಶ್ರೀಮಂತ ಎಂಬುವರಿಗೆ ಹಾಜರಾತಿ ನೀಡಲು 20 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ. ಕಳೆದ ರಾತ್ರಿ 15 ಸಾವಿರ ರೂಪಾಯಿ ಮುಂಗಡ ಹಣ ಪಡೆಯುತ್ತಿದ್ದಾಗ ಲೋಕಾಯುಕ್ತ ಡಿವೈಎಸ್ಪಿ ಗೀತಾ ಬೆನಾಳ ನೇತೃತ್ವದಲ್ಲಿ ದಾಳಿ ನಡೆಸಿ ವಶಕ್ಕೆ ಪಡೆಯಲಾಗಿದೆ.

WhatsApp Group Join Now
Telegram Group Join Now
Share This Article